ಈ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ.ಕಶ್ಯಪ್ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಪರಂವಃ ಪಿಕ್ಚರ್ಸ್ ಮೂಲಕ ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಛಾಯಾಚಿತ್ರಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ. ಸಿನಿಮಾ ಜುಲೈನಲ್ಲಿ ತೆರೆಗೆ ಬರಲಿದೆ.