ಈ ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್ ಭಟ್, ಕವಿರಾಜ್ ಮತ್ತು ವಿಜಯ್ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ರಾಜ್ ಸಾಹಸ, ಕಲೈ ಅವರ ನೃತ್ಯ ನಿರ್ದೇಶನವಿದೆ. ಬೆಂಗಳೂರು, ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್ಕುಮಾರ್, ಕಾಕ್ರೋಚ್ ಸುಧಿ, ಯಶ್ಶೆಟ್ಟಿ, ವಜ್ರಾಂಗ್ ಶೆಟ್ಟಿ, ಬಾಲ ರಾಜ್ವಾಡಿ, ಗಣೇಶ್ರಾವ್, ಭಾಸ್ಕರ್ ಪಾಂಡವಪುರ, ಮನಮೋಹನ್ ರೈ, ಮಹಾಂತೇಶ್ ಹೀರೆಮಠ, ಮಿಮಿಕ್ರಿ ಗೋಪಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.