<p>ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.</p>.<p>ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಈ ಧಾರಾವಾಹಿಯಲ್ಲಿನ ಅರಸನಕೋಟೆ ಅಖಿಲಾಂಡೇಶ್ವರಿಯ ದಿಟ್ಟ ಮಾತುಗಳು, ಮುದ್ದಾದ ಹುಡುಗಿ ಪಾರುವಿನ ಮುಗ್ಧತೆ, ಆದಿತ್ಯನ ಶಿಸ್ತು, ಪ್ರೀತಮ್ ಮಾಡುವ ತರಲೆ ವೀಕ್ಷಕರ ಗಮನ ಸೆಳೆಯುತ್ತಿವೆ.</p>.<p>ಬೃಹದಾಕಾರದ ಮನೆಗಳು, ಅಖಿಲಾಂಡೇಶ್ವರಿಯಿಂದ ಹಿಡಿದು ಎಲ್ಲಾ ಪಾತ್ರಧಾರಿಗಳು ಧರಿಸೋ ಸೀರೆ, ಒಡವೆಗಳು ವೀಕ್ಷಕರಿಗೂ ಇಷ್ಟವಾಗುತ್ತಿದೆ. ಈ ಧಾರಾವಾಹಿಯ ಕಥಾಹಂದರ ಪ್ರತಿ ಎಪಿಸೋಡಿನಲ್ಲೂವೀಕ್ಷಕರು ಕಾತುರದಿಂದ ಕಾಯುವಂತೆ ಮಾಡುತ್ತಿದೆ. ಅಖಿಲಾಂಡೇಶ್ವರಿ ಪಾತ್ರ ನಿರ್ವಹಿಸುತ್ತಿರುವ ವಿನಯಾ ಪ್ರಸಾದ್ ಅವರಾದಿಯಾಗಿ ಉಳಿದ ಬಹಳಷ್ಟು ಪಾತ್ರಗಳಲ್ಲಿ ತಾರಾ ವರ್ಚಸ್ಸಿನ ನಟ–ನಟಿಯರೇ ಕಾಣಿಸಿಕೊಂಡಿದ್ದು, ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್ ಕಿರುತೆರೆಗೆ ಪ್ರವೇಶಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.</p>.<p>ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಅದ್ದೂರಿ ಮದುವೆಗೆ ತಯಾರಿ ನಡೆಸಿದ್ದರೆ; ಪ್ರೀತಮ್ ತನ್ನ ಪ್ರೀತಿ ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನು ಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತುವಿನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ವೀಕ್ಷಕರಿಗೆ ಕೌತುಕ ಸೃಷ್ಟಿಸಿದೆ.</p>.<p>‘ಪಾರು’ ಧಾರಾವಾಹಿ ಸೋಮವಾರದಿಂದ - ಶುಕ್ರವಾರ ರಾತ್ರಿ 9:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.</p>.<p>ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಈ ಧಾರಾವಾಹಿಯಲ್ಲಿನ ಅರಸನಕೋಟೆ ಅಖಿಲಾಂಡೇಶ್ವರಿಯ ದಿಟ್ಟ ಮಾತುಗಳು, ಮುದ್ದಾದ ಹುಡುಗಿ ಪಾರುವಿನ ಮುಗ್ಧತೆ, ಆದಿತ್ಯನ ಶಿಸ್ತು, ಪ್ರೀತಮ್ ಮಾಡುವ ತರಲೆ ವೀಕ್ಷಕರ ಗಮನ ಸೆಳೆಯುತ್ತಿವೆ.</p>.<p>ಬೃಹದಾಕಾರದ ಮನೆಗಳು, ಅಖಿಲಾಂಡೇಶ್ವರಿಯಿಂದ ಹಿಡಿದು ಎಲ್ಲಾ ಪಾತ್ರಧಾರಿಗಳು ಧರಿಸೋ ಸೀರೆ, ಒಡವೆಗಳು ವೀಕ್ಷಕರಿಗೂ ಇಷ್ಟವಾಗುತ್ತಿದೆ. ಈ ಧಾರಾವಾಹಿಯ ಕಥಾಹಂದರ ಪ್ರತಿ ಎಪಿಸೋಡಿನಲ್ಲೂವೀಕ್ಷಕರು ಕಾತುರದಿಂದ ಕಾಯುವಂತೆ ಮಾಡುತ್ತಿದೆ. ಅಖಿಲಾಂಡೇಶ್ವರಿ ಪಾತ್ರ ನಿರ್ವಹಿಸುತ್ತಿರುವ ವಿನಯಾ ಪ್ರಸಾದ್ ಅವರಾದಿಯಾಗಿ ಉಳಿದ ಬಹಳಷ್ಟು ಪಾತ್ರಗಳಲ್ಲಿ ತಾರಾ ವರ್ಚಸ್ಸಿನ ನಟ–ನಟಿಯರೇ ಕಾಣಿಸಿಕೊಂಡಿದ್ದು, ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್ ಕಿರುತೆರೆಗೆ ಪ್ರವೇಶಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.</p>.<p>ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಅದ್ದೂರಿ ಮದುವೆಗೆ ತಯಾರಿ ನಡೆಸಿದ್ದರೆ; ಪ್ರೀತಮ್ ತನ್ನ ಪ್ರೀತಿ ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನು ಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತುವಿನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ವೀಕ್ಷಕರಿಗೆ ಕೌತುಕ ಸೃಷ್ಟಿಸಿದೆ.</p>.<p>‘ಪಾರು’ ಧಾರಾವಾಹಿ ಸೋಮವಾರದಿಂದ - ಶುಕ್ರವಾರ ರಾತ್ರಿ 9:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>