ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎದ್ದೇಳು ಮಂಜುನಾಥಾ–2’: ನಿರ್ದೇಶನದೊಂದಿಗೆ ಬಣ್ಣಹಚ್ಚಿದ ಗುರುಪ್ರಸಾದ್‌

Last Updated 9 ಮಾರ್ಚ್ 2022, 11:10 IST
ಅಕ್ಷರ ಗಾತ್ರ

‘ಎದ್ದೇಳು ಮಂಜುನಾಥಾ’ ಎಂದಾಕ್ಷಣ ನೆನಪಾಗುವುದು ನವರಸ ನಾಯಕ ಜಗ್ಗೇಶ್‌ ಅವರ ನಟನೆ ಹಾಗೂ ನಿರ್ದೇಶಕ ಗುರುಪ್ರಸಾದ್‌ ಅವರ ನಿರ್ದೇಶನ. ಇದೀಗ ಈ ಚಿತ್ರದ ಎರಡನೇ ಭಾಗ ಸೆಟ್ಟೇರಿದೆ. ಆದರೆ ಜಗ್ಗೇಶ್‌ ಅವರು ಎರಡನೇ ಭಾಗದಲ್ಲಿಲ್ಲ. ಬದಲಾಗಿ ನಿರ್ದೇಶನದೊಂದಿಗೆ ಪ್ರಮುಖ ಪಾತ್ರದಲ್ಲಿ ಗುರುಪ್ರಸಾದ್‌ ಅವರೇ ನಟಿಸಿದ್ದಾರೆ.

ಏಪ್ರಿಲ್‌ನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ರಚಿತಾ ಮಹಾಲಕ್ಷ್ಮಿ ಈ ಚಿತ್ರದ ನಾಯಕಿ. ಶರತ್ ಲೋಹಿತಾಶ್ವ, ಶಶಿಧರ್, ರವಿ ದೀಕ್ಷಿತ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

‘ಎದ್ದೇಳು ಮಂಜುನಾಥಾ’ ಚಿತ್ರದ ಸಮಯದಲ್ಲೇ ಸಿದ್ಧವಾದ ಕಥೆಯಿದು. ಚಿತ್ರ ನಿರ್ಮಾಣವಾಗಲು ಹತ್ತು ವರ್ಷ ಬೇಕಾಯಿತು. ಇದು ಲಾಕ್‌ಡೌನ್ ಸಮಯದಲ್ಲಿ ಚಿತ್ರೀಕರಣವಾದ ಚಿತ್ರ. ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ಮಾಪಕ ಶಶಿಧರ್ ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದಾರೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಲಿದ್ದೇವೆ. ಕಾಮಿಡಿ ಕ್ರೈಂ ಆಧಾರಿತ ಚಿತ್ರವಿದು. ಕ್ರೈಂ ಎಂದರೆ ಬರೀ ರಕ್ತದೋಕುಳಿ ಅಲ್ಲ. ಬೇರೊಂದು ರೀತಿಯಲ್ಲಿ ಹೇಳಬಹುದು ಎಂಬುದನ್ನು ನಮ್ಮ ಚಿತ್ರದಲ್ಲಿ ತೋರಿಸಿದ್ದೇವೆ’ ಎನ್ನುತ್ತಾರೆ ಗುರುಪ್ರಸಾದ್‌.

‘ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮನೋಹರ್ ಜೋಶಿ, ಸಿನಿಟಿಕ್ ಸೂರಿ, ವೇಲ್ ಮುರುಗನ್, ಅಶೋಕ್ ಸೇರಿ ನಾಲ್ಕು ಜನ ಛಾಯಾಗ್ರಾಹಕರು. ಏಪ್ರಿಲ್ ಅಂತ್ಯದಲ್ಲಿ ಒಟಿಟಿ ಅಥವಾ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT