<p>ಅಶ್ವಿನಿ ಪುನೀತ್ ರಾಜ್ಕುಮಾರ್ ಒಡೆತನದ ಪಿಆರ್ಕೆ ಆ್ಯಪ್ ಸಂದರ್ಶನದಲ್ಲಿ ಮಾತನಾಡಿರುವ ನಿರ್ದೇಶಕ ಮಹೇಶ್ ಬಾಬು ಅವರು ಅಪ್ಪು ಅವರ ಜತೆಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. </p><p>‘ಪುನೀತ್ ರಾಜ್ಕುಮಾರ್ ಅವರ ಜೊತೆ ‘ಅಪ್ಪು’ ಸಿನಿಮಾದಲ್ಲಿ ನಾನು ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಒಳ್ಳೆಯ ವಿಚಾರಗಳ ಬಗ್ಗೆ ಚರ್ಚಿಸುತ್ತಿದ್ದೆವು ಎಂದು ಮೆಲುಕು ಹಾಕಿದ್ದಾರೆ.</p>.ಸುದೀಪ್ ಸೋದರಳಿಯನ ಚಿತ್ರದ ಅರಗಿಣಿಯೇ.. ಹಾಡಿಗೆ ಸಾನ್ವಿ ಧ್ವನಿ: ನಾಳೆ ಬಿಡುಗಡೆ.<p>‘ಅಣ್ಣಾವ್ರ ಮಗ ಎಂದ ಮಾತ್ರಕ್ಕೆ ಜನರು ನನ್ನ ಸಿನಿಮಾ ನೋಡಬಾರದು. ಅಭಿಮಾನಿಗಳು ನನ್ನ ನಟನೆಯನ್ನು ಇಷ್ಟಪಟ್ಟರೆ ಮಾತ್ರ ಚಿತ್ರರಂಗದಲ್ಲಿ ಉಳಿಯುವೆ ಎನ್ನುತ್ತಿದ್ದರು’ ಎಂದು ಮಹೇಶ್ ಹೇಳಿಕೊಂಡಿದ್ದಾರೆ. </p><p>‘ಅಪ್ಪು’ ಚಿತ್ರದಲ್ಲಿ ನಾಯಕಿ ರಕ್ಷಿತಾ ಅವರನ್ನು ಪುನೀತ್ ಅವರು ಅಪ್ಪಿಕೊಳ್ಳುವ ದೃಶ್ಯದ ಚಿತ್ರೀಕರಣ ಮಾಡಬೇಕಿತ್ತು. ಪತ್ನಿ ಅಶ್ವಿನಿ ಅವರು ಬೇಸರ ಮಾಡಿಕೊಳ್ಳುತ್ತಾರೆ ಎಂದು ಅಪ್ಪು ಆ ದೃಶ್ಯ ಮಾಡಲು ಒಪ್ಪಿರಲಿಲ್ಲ. ಪಾರ್ವತಮ್ಮ ಅವರು ಹೇಳಿದ ನಂತರ ಅಪ್ಪುಗೆ ದೃಶ್ಯಕ್ಕೆ ಒಪ್ಪಿಕೊಂಡಿದ್ದರು’ ಎಂದು ಅಪ್ಪು ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. <br><br>‘ವೀರ ಕನ್ನಡಿಗ’ ಚಿತ್ರದ ಹಾಡಿನ ಚಿತ್ರೀಕರಣ ಮುಗಿಸಿ ಮನೆಗೆ ಹಿಂದಿರುಗಬೇಕಾದರೆ ನಾನು ರೈಲು ಟಿಕೆಟ್ ಬುಕ್ ಮಾಡಿದ್ದೆ, ಪುನೀತ್ ರಾಜ್ಕುಮಾರ್ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ನಾನು ರೈಲಿನಲ್ಲಿ ಹೋಗುತ್ತೇನೆಂದು ಆ ಕೂಡಲೇ ನನಗೂ ವಿಮಾನ ಟಿಕೆಟ್ ಬುಕ್ ಮಾಡಿಕೊಟ್ಟಿದ್ದರು’ ಎಂದು ಅಪ್ಪು ಅವರ ಸರಳತೆ ಬಗ್ಗೆ ಕೊಂಡಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಶ್ವಿನಿ ಪುನೀತ್ ರಾಜ್ಕುಮಾರ್ ಒಡೆತನದ ಪಿಆರ್ಕೆ ಆ್ಯಪ್ ಸಂದರ್ಶನದಲ್ಲಿ ಮಾತನಾಡಿರುವ ನಿರ್ದೇಶಕ ಮಹೇಶ್ ಬಾಬು ಅವರು ಅಪ್ಪು ಅವರ ಜತೆಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. </p><p>‘ಪುನೀತ್ ರಾಜ್ಕುಮಾರ್ ಅವರ ಜೊತೆ ‘ಅಪ್ಪು’ ಸಿನಿಮಾದಲ್ಲಿ ನಾನು ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಒಳ್ಳೆಯ ವಿಚಾರಗಳ ಬಗ್ಗೆ ಚರ್ಚಿಸುತ್ತಿದ್ದೆವು ಎಂದು ಮೆಲುಕು ಹಾಕಿದ್ದಾರೆ.</p>.ಸುದೀಪ್ ಸೋದರಳಿಯನ ಚಿತ್ರದ ಅರಗಿಣಿಯೇ.. ಹಾಡಿಗೆ ಸಾನ್ವಿ ಧ್ವನಿ: ನಾಳೆ ಬಿಡುಗಡೆ.<p>‘ಅಣ್ಣಾವ್ರ ಮಗ ಎಂದ ಮಾತ್ರಕ್ಕೆ ಜನರು ನನ್ನ ಸಿನಿಮಾ ನೋಡಬಾರದು. ಅಭಿಮಾನಿಗಳು ನನ್ನ ನಟನೆಯನ್ನು ಇಷ್ಟಪಟ್ಟರೆ ಮಾತ್ರ ಚಿತ್ರರಂಗದಲ್ಲಿ ಉಳಿಯುವೆ ಎನ್ನುತ್ತಿದ್ದರು’ ಎಂದು ಮಹೇಶ್ ಹೇಳಿಕೊಂಡಿದ್ದಾರೆ. </p><p>‘ಅಪ್ಪು’ ಚಿತ್ರದಲ್ಲಿ ನಾಯಕಿ ರಕ್ಷಿತಾ ಅವರನ್ನು ಪುನೀತ್ ಅವರು ಅಪ್ಪಿಕೊಳ್ಳುವ ದೃಶ್ಯದ ಚಿತ್ರೀಕರಣ ಮಾಡಬೇಕಿತ್ತು. ಪತ್ನಿ ಅಶ್ವಿನಿ ಅವರು ಬೇಸರ ಮಾಡಿಕೊಳ್ಳುತ್ತಾರೆ ಎಂದು ಅಪ್ಪು ಆ ದೃಶ್ಯ ಮಾಡಲು ಒಪ್ಪಿರಲಿಲ್ಲ. ಪಾರ್ವತಮ್ಮ ಅವರು ಹೇಳಿದ ನಂತರ ಅಪ್ಪುಗೆ ದೃಶ್ಯಕ್ಕೆ ಒಪ್ಪಿಕೊಂಡಿದ್ದರು’ ಎಂದು ಅಪ್ಪು ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. <br><br>‘ವೀರ ಕನ್ನಡಿಗ’ ಚಿತ್ರದ ಹಾಡಿನ ಚಿತ್ರೀಕರಣ ಮುಗಿಸಿ ಮನೆಗೆ ಹಿಂದಿರುಗಬೇಕಾದರೆ ನಾನು ರೈಲು ಟಿಕೆಟ್ ಬುಕ್ ಮಾಡಿದ್ದೆ, ಪುನೀತ್ ರಾಜ್ಕುಮಾರ್ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ನಾನು ರೈಲಿನಲ್ಲಿ ಹೋಗುತ್ತೇನೆಂದು ಆ ಕೂಡಲೇ ನನಗೂ ವಿಮಾನ ಟಿಕೆಟ್ ಬುಕ್ ಮಾಡಿಕೊಟ್ಟಿದ್ದರು’ ಎಂದು ಅಪ್ಪು ಅವರ ಸರಳತೆ ಬಗ್ಗೆ ಕೊಂಡಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>