ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುದೀಪ್‌ಗೆ ಅವಮಾನಿಸಿದ ವ್ಯಕ್ತಿಗೆ ನಿರ್ದೇಶಕ ನಂದ ಕಿಶೋರ್‌ ಹಿಗ್ಗಾಮುಗ್ಗಾ ತರಾಟೆ

Last Updated 4 ಜುಲೈ 2022, 11:22 IST
ಅಕ್ಷರ ಗಾತ್ರ

ಚಂದನವನದಲ್ಲಿಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ‘ವಿಕ್ರಾಂತ್ ರೋಣ’ ಸಿನಿಮಾದಪ್ರಚಾರದಲ್ಲಿ ಹವಾ ಸೃಷ್ಟಿಯಾಗಿರುವಬೆನ್ನಲೇ, ಸುದೀಪ್‌ ಬಗ್ಗೆ ವ್ಯಕ್ತಿಯೊಬ್ಬಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಆ ವ್ಯಕ್ತಿಯ ವಿಡಿಯೊ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸ್ಯಾಂಡಲ್‌ವುಡ್‌ನಿರ್ದೇಶಕ ನಂದ ಕಿಶೋರ್‌ ಕೂಡ ಆ ವ್ಯಕ್ತಿಯ ವಿರುದ್ಧ ಗರಂ ಆಗಿದ್ದಾರೆ.

ಸುದೀಪ್‌ ಅವರು ‘ರಮ್ಮಿ ಸರ್ಕಲ್‌‘ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಸುದೀಪ್‌ಗೆಅವಹೇಳನಕಾರಿ ಹೇಳಿಕೆ ನೀಡಿದ್ದಾನೆ. ಸುದೀಪ್‌ ಮಾತ್ರವಲ್ಲದೇ ಈ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಇತರೆ ನಟರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತ ವಿಡಿಯೊಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸುದೀಪ್ ಅಭಿಮಾನಿಗಳು ಮಾತ್ರವಲ್ಲದೇ ಕನ್ನಡ ಚಿತ್ರರಂಗದಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆಬೆನ್ನಲ್ಲೇ ನಿರ್ದೇಶಕ ನಂದಕಿಶೋರ್ ಅವರು ಅವಹೇಳನಕಾರಿ ವಿಡಿಯೊ ಹಾಕಿರುವ ವ್ಯಕ್ತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಾವಿದರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು ಎಂದಿದ್ದಾರೆ.ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ಅದಕ್ಕೆ ನಮ್ಮ ಹೆಮ್ಮೆಯ ನಟರೇ ಕಾರಣ. ಅಂಥವರ ಬಗ್ಗೆ ಮನಸ್ಸಿಗೆ ಬಂದಂತೆ ಮಾತನಾಡಬಾರದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಡಿಯೊ ಹೇಳಿಕೆ ಸುದೀಪ್‌ ಅಭಿಮಾಣಿಗಳ ಪೇಜ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಕನ್ನಡದ ಕೆಲವು ಮಾಧ್ಯಮಗಳು ಈ ವಿಡಿಯೊ ಹೇಳಿಕೆಯನ್ನು ಪ್ರಕಟಿಸಿವೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT