<p>ನಟ ಪ್ರಭುದೇವ, ಶರತ್ ಕುಮಾರ್ ಸೇರಿದಂತೆ ಅನೇಕ ಕಲಾವಿದರನ್ನು ನಾಯಕರನ್ನಾಗಿ ಪರಿಚಯಿಸಿದ್ದ ತಮಿಳಿನ ಹಿರಿಯ ನಿರ್ದೇಶಕ ಪವಿತ್ರನ್ ಕನ್ನಡಕ್ಕೆ ಬಂದಿದ್ದಾರೆ. ಅವರು ನಿರ್ದೇಶಿಸಿರುವ ಮೊದಲ ಕನ್ನಡ ಚಿತ್ರ ‘ಕರ್ಕಿ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. </p>.<p>‘ಜಾತಿ ಮತ್ತು ಜನಾಂಗ, ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿವೆ’ ಎಂದರು ನಿರ್ದೇಶಕರು.</p>.<p>ಸಿನಿಮಾ ವಿತರಕ ಪ್ರಕಾಶ್ ಪಳನಿ ಬಂಡವಾಳ ಹೂಡಿದ್ದಾರೆ. ಈಗಾಗಲೇ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್ ಈ ಚಿತ್ರದ ನಾಯಕ. ಮಲೆಯಾಳಿ ಬೆಡಗಿ ಮೀನಾಕ್ಷಿ ಇವರಿಗೆ ಜೋಡಿಯಾಗಿದ್ದಾರೆ. </p>.<p>ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ, ‘ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ’ ಎಂದರು.</p>.<p>ಸಾಧುಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹೃಷಿಕೇಶ ಛಾಯಾಚಿತ್ರಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ಚಿತ್ರೀಕರಣಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ಪ್ರಭುದೇವ, ಶರತ್ ಕುಮಾರ್ ಸೇರಿದಂತೆ ಅನೇಕ ಕಲಾವಿದರನ್ನು ನಾಯಕರನ್ನಾಗಿ ಪರಿಚಯಿಸಿದ್ದ ತಮಿಳಿನ ಹಿರಿಯ ನಿರ್ದೇಶಕ ಪವಿತ್ರನ್ ಕನ್ನಡಕ್ಕೆ ಬಂದಿದ್ದಾರೆ. ಅವರು ನಿರ್ದೇಶಿಸಿರುವ ಮೊದಲ ಕನ್ನಡ ಚಿತ್ರ ‘ಕರ್ಕಿ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. </p>.<p>‘ಜಾತಿ ಮತ್ತು ಜನಾಂಗ, ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿವೆ’ ಎಂದರು ನಿರ್ದೇಶಕರು.</p>.<p>ಸಿನಿಮಾ ವಿತರಕ ಪ್ರಕಾಶ್ ಪಳನಿ ಬಂಡವಾಳ ಹೂಡಿದ್ದಾರೆ. ಈಗಾಗಲೇ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್ ಈ ಚಿತ್ರದ ನಾಯಕ. ಮಲೆಯಾಳಿ ಬೆಡಗಿ ಮೀನಾಕ್ಷಿ ಇವರಿಗೆ ಜೋಡಿಯಾಗಿದ್ದಾರೆ. </p>.<p>ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ, ‘ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ’ ಎಂದರು.</p>.<p>ಸಾಧುಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹೃಷಿಕೇಶ ಛಾಯಾಚಿತ್ರಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ಚಿತ್ರೀಕರಣಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>