ಮಾರ್ಚ್ 11ರಂದೇ ತೆಲುಗಿನ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಅದೇ ಹೊತ್ತಿನಲ್ಲಿ ಕನ್ನಡದ ಡಬ್ ಸಿನಿಮಾ ‘ರಾಬರ್ಟ್’ನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಅಲ್ಲಿನ ಚಿತ್ರರಂಗ ನಿರ್ಧರಿಸಿದ್ದು, ರಾಬರ್ಟ್ಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಅವಕಾಶ ಕೊಡಬಾರದು ಎಂದು ಸೂಚನೆ ನೀಡಿತ್ತು. ತೆಲುಗು ಚಿತ್ರರಂಗದ ಈ ನಿರ್ಧಾರದಿಂದ ರಾಬರ್ಟ್ ಚಿತ್ರತಂಡವೂ ಆತಂಕಕ್ಕೆ ಒಳಗಾಗಿತ್ತು. ನಟ ದರ್ಶನ್ ಕೂಡಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಸಂಬಂಧಿಸಿ ನಡೆದ ಸಭೆಯಲ್ಲಿ ಭಾಗವಹಿಸಿದ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಈ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದ್ದರು.