<p><strong>ಬೆಂಗಳೂರು:</strong> ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಬದುಕನ್ನು ಆಧರಿಸಿದ ಸಾಕ್ಷ್ಯಚಿತ್ರ 'ಗೌರಿ' ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹಲವು ಸಿನಿಮೇಳಗಳಿಗೂ ಆಯ್ಕೆಯಾಗಿದೆ.</p>.<p>ಗೌರಿ ಅವರ ಸಹೋದರಿ, ನಿರ್ದೇಶಕಿ ಕವಿತಾ ಲಂಕೇಶ್ ಅವರು ನಿರ್ದೇಶಿಸಿದ ಸಾಕ್ಷ್ಯಚಿತ್ರವು ಟೊರೆಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್ 2022ರ 'ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.</p>.<p>ಕೆನಡಾದ ಮಾಂಟ್ರಿಯಲ್ನಲ್ಲಿ ನಡೆಯಲಿರುವ ಪ್ರತಿಷ್ಠಿತ ದಕ್ಷಿಣ ಏಷ್ಯಾದ ಫಿಲ್ಮ್ ಫೆಸ್ಟಿವಲ್ಗೆ ಗೌರಿ ಸಾಕ್ಷ್ಯಚಿತ್ರ ಆಯ್ಕೆಯಾಗಿದೆ. ಆ್ಯಮ್ಸ್ಟರ್ಡಾಂನ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರಗಳ ಹಬ್ಬ, ಸಂಡನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಇತರ ಅಂತರರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ಗಳಿಗೂ ಆಯ್ಕೆಯಾಗಿದೆ.</p>.<p>ಭಾರತದಲ್ಲಿ ಪ್ರತಿದಿನವು ಪತ್ರಕರ್ತರು ಎದುರಿಸುತ್ತಿರುವ ಜೀವ ಬೆದರಿಕೆಗಳು, ದೈಹಿಕ ಮತ್ತು ಮಾನಸಿಕ ಹಿಂಸೆಗಳನ್ನು ಈ ಸಾಕ್ಷ್ಯಚಿತ್ರವು ಬಹಿರಂಗಪಡಿಸುತ್ತದೆ. ಭಾರತದಲ್ಲಿ ಕಳೆದ ಐದು ವರ್ಷಗಳಲ್ಲಿ 200ಕ್ಕೂ ಹೆಚ್ಚು ಇಂತಹ ದಾಳಿಗಳು ವರದಿಯಾಗಿವೆ. ಕಳೆದ ಒಂದು ದಶಕದಲ್ಲಿ 30 ಹತ್ಯೆಗಳು ನಡೆದಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.</p>.<p>ನಂಬಿಕೆಗೆ ಆಘಾತವಾದ ಭಾವ ತೀವ್ರತೆಯಿಂದ ದಾಳಿಗಳು ನಡೆದಿವೆ ಎನ್ನಲಾಗುತ್ತದೆ. ಆದರೆ ಹತ್ಯೆಯ ಹಿಂದಿನ ಉದ್ದೇಶ ಬೇರೆಯದ್ದೇ ಆಗಿರುತ್ತದೆ. ಹತ್ಯೆ ಹಿಂದಿನ ಉದ್ದೇಶ ಬಹಳ ಕಳವಳಕಾರಿಯಾಗಿದೆ. ಭಾರತವು ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180ರ ಪೈಕಿ 150ನೇ ಸ್ಥಾನದಲ್ಲಿದೆ ಎಂದರು.</p>.<p>2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜರಾಜೇಶ್ವರಿ ನಗರದ ಅವರ ಮನೆಯ ಎದುರಲ್ಲೇ ದುಷ್ಕರ್ಮಿಗಳು ಬಹಳ ಸಮೀಪದಿಂದ ಗುಂಡು ಹಾರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಬದುಕನ್ನು ಆಧರಿಸಿದ ಸಾಕ್ಷ್ಯಚಿತ್ರ 'ಗೌರಿ' ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹಲವು ಸಿನಿಮೇಳಗಳಿಗೂ ಆಯ್ಕೆಯಾಗಿದೆ.</p>.<p>ಗೌರಿ ಅವರ ಸಹೋದರಿ, ನಿರ್ದೇಶಕಿ ಕವಿತಾ ಲಂಕೇಶ್ ಅವರು ನಿರ್ದೇಶಿಸಿದ ಸಾಕ್ಷ್ಯಚಿತ್ರವು ಟೊರೆಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್ 2022ರ 'ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.</p>.<p>ಕೆನಡಾದ ಮಾಂಟ್ರಿಯಲ್ನಲ್ಲಿ ನಡೆಯಲಿರುವ ಪ್ರತಿಷ್ಠಿತ ದಕ್ಷಿಣ ಏಷ್ಯಾದ ಫಿಲ್ಮ್ ಫೆಸ್ಟಿವಲ್ಗೆ ಗೌರಿ ಸಾಕ್ಷ್ಯಚಿತ್ರ ಆಯ್ಕೆಯಾಗಿದೆ. ಆ್ಯಮ್ಸ್ಟರ್ಡಾಂನ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರಗಳ ಹಬ್ಬ, ಸಂಡನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಇತರ ಅಂತರರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ಗಳಿಗೂ ಆಯ್ಕೆಯಾಗಿದೆ.</p>.<p>ಭಾರತದಲ್ಲಿ ಪ್ರತಿದಿನವು ಪತ್ರಕರ್ತರು ಎದುರಿಸುತ್ತಿರುವ ಜೀವ ಬೆದರಿಕೆಗಳು, ದೈಹಿಕ ಮತ್ತು ಮಾನಸಿಕ ಹಿಂಸೆಗಳನ್ನು ಈ ಸಾಕ್ಷ್ಯಚಿತ್ರವು ಬಹಿರಂಗಪಡಿಸುತ್ತದೆ. ಭಾರತದಲ್ಲಿ ಕಳೆದ ಐದು ವರ್ಷಗಳಲ್ಲಿ 200ಕ್ಕೂ ಹೆಚ್ಚು ಇಂತಹ ದಾಳಿಗಳು ವರದಿಯಾಗಿವೆ. ಕಳೆದ ಒಂದು ದಶಕದಲ್ಲಿ 30 ಹತ್ಯೆಗಳು ನಡೆದಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.</p>.<p>ನಂಬಿಕೆಗೆ ಆಘಾತವಾದ ಭಾವ ತೀವ್ರತೆಯಿಂದ ದಾಳಿಗಳು ನಡೆದಿವೆ ಎನ್ನಲಾಗುತ್ತದೆ. ಆದರೆ ಹತ್ಯೆಯ ಹಿಂದಿನ ಉದ್ದೇಶ ಬೇರೆಯದ್ದೇ ಆಗಿರುತ್ತದೆ. ಹತ್ಯೆ ಹಿಂದಿನ ಉದ್ದೇಶ ಬಹಳ ಕಳವಳಕಾರಿಯಾಗಿದೆ. ಭಾರತವು ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180ರ ಪೈಕಿ 150ನೇ ಸ್ಥಾನದಲ್ಲಿದೆ ಎಂದರು.</p>.<p>2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜರಾಜೇಶ್ವರಿ ನಗರದ ಅವರ ಮನೆಯ ಎದುರಲ್ಲೇ ದುಷ್ಕರ್ಮಿಗಳು ಬಹಳ ಸಮೀಪದಿಂದ ಗುಂಡು ಹಾರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>