ಪುನೀತ್ ಅವರ ಕನಸಿನ ಪ್ರಾಜೆಕ್ಟ್ ಕುರಿತು ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, ‘ಗಂಧದ ಗುಡಿ ಒಂದು ಸಾಕ್ಷ್ಯಚಿತ್ರ. ಅದನ್ನು ಅಪ್ಪು ಪುನೀತ್ ರಾಜ್ಕುಮಾರ್ ಆಗಿ ಮಾಡಿಲ್ಲ. ಬದಲಾಗಿ ಸಾಮಾನ್ಯ ವ್ಯಕ್ತಿಯಾಗಿ ಯಾವುದೇ ಮೇಕ್ಅಪ್ ಇಲ್ಲದೆ ನಟಿಸಿ ಒಂದು ಉತ್ತಮ ಸಂದೇಶವನ್ನು ನೀಡಿದ್ದಾನೆ. ಅದು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ವನ್ಯಜೀವಿ, ವನ್ಯಲೋಕ ಎಷ್ಟು ಪ್ರಮುಖ ಹಾಗೂ ಅದರ ರಕ್ಷಣೆ ಎಷ್ಟು ಮುಖ್ಯ ಎನ್ನುವುದು ಇದರಲ್ಲಿದೆ. ಜೊತೆಗೆ ಕಾಡು ನಾಶ ತಡೆ ಹಾಗೂ ಬುಡಕಟ್ಟು ಜನರ ಬಗ್ಗೆಯೂ ಇಲ್ಲಿ ಮಾಹಿತಿ ಇದೆ. ಇದು ಅಪ್ಪು ಬಿಟ್ಟುಹೋಗಿರುವ ಕೊನೆಯ ಆಸ್ತಿ. ಇದು ಇಡೀ ಪ್ರಪಂಚಕ್ಕೆ ಅನ್ವಯಿಸುತ್ತದೆ’ ಎಂದರು.