ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ಧನಂಜಯ್, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ಇಲ್ಲಿ ನಡೆಯಲಿದೆ. ಬೆಳಗಾವಿಯಲ್ಲಿ ನಡೆಯುವ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ಹೆಣೆದಿರುವ ಕಥೆ ಇದಾಗಿದೆ ಎಂದಿದೆ ಚಿತ್ರತಂಡ.