‘ಶಾಲಾ ಆಡಳಿತ ಮಂಡಳಿ ಸಿಬ್ಬಂದಿಯನ್ನು ಬುಧವಾರ ಭೇಟಿಯಾಗಿದ್ದ ಬಾಲಕೃಷ್ಣ ಅವರು ಫೆಬ್ರುವರಿ ಮೊದಲ ವಾರದಲ್ಲಿ ಮಗಳ ಶಾಲಾ ಶುಲ್ಕ ₹2ಸಾವಿರ ಪಾವತಿಸುವುದಾಗಿ ತಿಳಿಸಿದ್ದರು. ಹೀಗಿದ್ದರೂ, ಇದೇ ವಿಷಯ ಪ್ರಸ್ತಾಪಿಸಿ ಶಾಲಾ ಆಡಳಿತ ಮಂಡಳಿ ಮರುದಿನ ವಿದ್ಯಾರ್ಥಿನಿಗೆ ಅವಮಾನ ಮಾಡಿದ್ದರು. ಇದರಿಂದ ತೀವ್ರ ಬೇಸರಗೊಂಡ ವಿದ್ಯಾರ್ಥಿನಿ ಸಂಜೆ 4.30ರ ವೇಳೆಗೆ ಶಾಲೆಯಿಂದ ಹಿಂತಿರುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಸುನೀತಾ ಕೆಲಸ ಮುಗಿಸಿ ಮನೆಗೆ ಬಂದ ವೇಳೆ ಮಗಳು ಆತ್ಮಹತ್ಯೆಗೆ ಮುಂದಾಗಿದ್ದು ಗೊತ್ತಾಗಿದೆ’ ಎಂದು ಮಲ್ಕಾಜ್ಗಿರಿ ಪೊಲೀಸರು ತಿಳಿಸಿದ್ದಾರೆ.