ಇದೇ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳಾದ ಪ್ರಶಾಂತ್ ರಾಜು ಜಿ., ಅಭಿಸ್ವಾಮಿ ಮತ್ತು ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 24ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್, ತೀರ್ಪು ಕಾಯ್ದಿರಿಸಿದ್ದರು. ಮಂಗಳವಾರ ತೀರ್ಮಾನ ಪ್ರಕಟಿಸಿದ ನ್ಯಾಯಮೂರ್ತಿ, ಎಲ್ಲ ಆರೋಪಿಗಳ ಅರ್ಜಿಗಳನ್ನೂ ತಿರಸ್ಕರಿಸಿದರು.