ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ವಿವರಣೆ ನೀಡಿದ ದುನಿಯಾ ವಿಜಯ್‌

ಜನ್ಮದಿನ ಸಂದರ್ಭದಲ್ಲಿ ತಲ್ವಾರ್‌ ಬಳಕೆ
Last Updated 21 ಜನವರಿ 2020, 22:31 IST
ಅಕ್ಷರ ಗಾತ್ರ

ಬೆಂಗಳೂರು: ಅಭಿಮಾನಿಗಳ ಸಮ್ಮುಖದಲ್ಲಿ ಇದೇ 19ರಂದು ತಮ್ಮ 46ನೇ ಜನ್ಮದಿನ ಆಚರಣೆ ವೇಳೆ ಕತ್ತಿಯಲ್ಲಿ (ತಲ್ವಾರ್) ಕೇಕ್ ಕತ್ತರಿಸಿದ್ದ ನಟ ದುನಿಯಾ ವಿಜಯ್ ಗಿರಿನಗರ ಠಾಣೆಯಲ್ಲಿ ಮಂಗಳವಾರ ವಿಚಾರಣೆಗೆ ಹಾಜರಾದರು.

ಶಸ್ತ್ರಾಸ್ತ್ರಗಳ ಕಾಯ್ದೆ ಉಲ್ಲಂಘಿಸಿದ್ದಾರೆಂದು ವಿಜಯ್ ಅವರಿಗೆ ಗಿರಿನಗರ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ಬಂದ ಅವರು, ಸುಮಾರು ಎರಡು ಗಂಟೆಗಳು ಪೊಲೀಸರ ಎದುರು ವಿವರಣೆ ನೀಡಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಜಯ್, 'ನನ್ನಿಂದ ತಪ್ಪಾಗಿದೆ. ಮತ್ತೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ. ಮತ್ತೆ ವಿಚಾರಣೆಗೆ ಹಾಜರಾಗುತ್ತೇನೆ’ ಎಂದರು.

‘ಜನ್ಮದಿನದ ಆಚರಣೆ ಸಂದರ್ಭದಲ್ಲಿ ತೊಂದರೆಯಾಗಿದೆ ಎಂದು ಅಕ್ಕಪಕ್ಕದವರು ದೂರಿದ್ದಾರೆ. ಇನ್ನು ಮುಂದೆ ಆ ರೀತಿ ಆಗದಂತೆಯೂ ನೋಡಿಕೊಳ್ಳುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT