<p>ತಿಲಕ್ ಮತ್ತು ಕಿರುತೆರೆ ನಟಿ ಆಸಿಯಾಫಿರ್ದೋಸಿ ಮುಖ್ಯ ಭೂಮಿಕೆಯಲ್ಲಿರುವ ‘ದ್ವಂದ್ವ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಎಲ್.ಭರತ್ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕಾಮನ್ಮ್ಯಾನ್ ಪ್ರೊಡಕ್ಷನ್ ಅಡಿಯಲ್ಲಿ ಪ್ರದೀಪ್ ಕೌದಳ್ಳಿ ಬಂಡವಾಳ ಹೂಡುತ್ತಿದ್ದಾರೆ.</p>.<p>‘ಸೈನ್ಸ್ ಫಿಕ್ಷನ್ ಎಳೆಯನ್ನು ಹೊಂದಿರುವ ಚಿತ್ರವಿದು. ಹೈಪರ್ಟೈಮಿಸಿಯಾ ಕಾಯಿಲೆ ಇರುವ ಹುಡುಗಿಯು ಒಂದು ಸಲ ಏನನ್ನಾದರೂ ನೋಡಿದರೆ 10-20 ವರ್ಷದ ನೆನಪಿನಲ್ಲಿ ಇಟ್ಟುಕೊಳ್ಳುತ್ತಾಳೆ. ಇದನ್ನು ಅರಿತುಕೊಂಡ ಪ್ರಭಾವಿ ರಾಜಕಾರಣಿಗಳು ಆಕೆಯನ್ನು ಯಾವ ರೀತಿ ಉಪಯೋಗಿಸಿಕೊಳ್ಳುತ್ತಾರೆ. ಇದರಿಂದ ಅವಳ ಬದುಕು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ’ ಎಂದರು ನಿರ್ದೇಶಕ ಭರತ್.</p>.<p>ಕಿರುತೆರೆ ನಟಿಯರಾದ ಆಸಿಯಾಫಿರ್ದೋಸಿ ಹಾಗೂ ನಯನ ನಾಯಕಿಯರು. ಉಳಿದಂತೆ ಅನಿತಾ ಭಟ್, ಶೋಭರಾಜ್, ದಿನೇಶ್ ಮಂಗಳೂರು, ಬಲರಾಜವಾಡಿ ಮೊದಲಾದವರು ತಾರಾಗಣದಲ್ಲಿದ್ದಾರೆ. ಎರಡು ಹಾಡುಗಳಿಗೆ ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಮತ್ತು ಸಂಕಲನ ಋಷಿಕೇಶ್ ಅವರದ್ದು. ಬೆಂಗಳೂರು, ಮೂಡಿಗೆರೆ, ಸಕಲೇಶಪುರ, ಊಟಿ ಮೊದಲಾದೆಡೆ ಚಿತ್ರೀಕರಣಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಲಕ್ ಮತ್ತು ಕಿರುತೆರೆ ನಟಿ ಆಸಿಯಾಫಿರ್ದೋಸಿ ಮುಖ್ಯ ಭೂಮಿಕೆಯಲ್ಲಿರುವ ‘ದ್ವಂದ್ವ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಎಲ್.ಭರತ್ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕಾಮನ್ಮ್ಯಾನ್ ಪ್ರೊಡಕ್ಷನ್ ಅಡಿಯಲ್ಲಿ ಪ್ರದೀಪ್ ಕೌದಳ್ಳಿ ಬಂಡವಾಳ ಹೂಡುತ್ತಿದ್ದಾರೆ.</p>.<p>‘ಸೈನ್ಸ್ ಫಿಕ್ಷನ್ ಎಳೆಯನ್ನು ಹೊಂದಿರುವ ಚಿತ್ರವಿದು. ಹೈಪರ್ಟೈಮಿಸಿಯಾ ಕಾಯಿಲೆ ಇರುವ ಹುಡುಗಿಯು ಒಂದು ಸಲ ಏನನ್ನಾದರೂ ನೋಡಿದರೆ 10-20 ವರ್ಷದ ನೆನಪಿನಲ್ಲಿ ಇಟ್ಟುಕೊಳ್ಳುತ್ತಾಳೆ. ಇದನ್ನು ಅರಿತುಕೊಂಡ ಪ್ರಭಾವಿ ರಾಜಕಾರಣಿಗಳು ಆಕೆಯನ್ನು ಯಾವ ರೀತಿ ಉಪಯೋಗಿಸಿಕೊಳ್ಳುತ್ತಾರೆ. ಇದರಿಂದ ಅವಳ ಬದುಕು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ’ ಎಂದರು ನಿರ್ದೇಶಕ ಭರತ್.</p>.<p>ಕಿರುತೆರೆ ನಟಿಯರಾದ ಆಸಿಯಾಫಿರ್ದೋಸಿ ಹಾಗೂ ನಯನ ನಾಯಕಿಯರು. ಉಳಿದಂತೆ ಅನಿತಾ ಭಟ್, ಶೋಭರಾಜ್, ದಿನೇಶ್ ಮಂಗಳೂರು, ಬಲರಾಜವಾಡಿ ಮೊದಲಾದವರು ತಾರಾಗಣದಲ್ಲಿದ್ದಾರೆ. ಎರಡು ಹಾಡುಗಳಿಗೆ ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಮತ್ತು ಸಂಕಲನ ಋಷಿಕೇಶ್ ಅವರದ್ದು. ಬೆಂಗಳೂರು, ಮೂಡಿಗೆರೆ, ಸಕಲೇಶಪುರ, ಊಟಿ ಮೊದಲಾದೆಡೆ ಚಿತ್ರೀಕರಣಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>