ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಾರಕೀಶ್‌ ನಿಧನ: ಸಿಎಂ ಸಿದ್ಧರಾಮಯ್ಯ, ಸುದೀಪ್, ಯಶ್ ಸೇರಿ ಗಣ್ಯರಿಂದ ಅಂತಿಮ ನಮನ

Published 17 ಏಪ್ರಿಲ್ 2024, 4:32 IST
Last Updated 17 ಏಪ್ರಿಲ್ 2024, 4:32 IST
ಅಕ್ಷರ ಗಾತ್ರ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ದ್ವಾರಕೀಶ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಿನಿಮಾರಂಗದ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. 

ಬುಧವಾರ ಬೆಳಿಗ್ಗೆ 7.30ರಿಂದ 11.30ರ ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ’ ಎಂದು ದ್ವಾರಕೀಶ್‌ ಪುತ್ರ ಗಿರಿ ತಿಳಿಸಿದ್ದಾರೆ.

ಕಿಚ್ಚ ಸುದೀಪ್‌, ಸುಧಾರಾಣಿ, ರಮೇಶ್‌ ಅರವಿಂದ್‌, ಮುಖ್ಯಮಂತ್ರಿ ಚಂದ್ರು, ಸುಚೇಂದ್ರ ಪ್ರಸಾದ್‌ ಸೇರಿದಂತೆ ಸಿನಿಮಾರಂಗದ ಅನೇಕ ತಾರೆಯರು ಅಂತಿಮ ನಮನ ಸಲ್ಲಿಸಿದರು.

ನಟರಾದ ಯಶ್, ಜಗ್ಗೇಶ್, ರವಿಚಂದ್ರನ್, ಅನಿರುದ್ಧ, ಕುಮಾರ್ ಗೋವಿಂದ್, ನಟಿ, ಸಂಸದೆ ಸುಮಲತಾ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ದ್ವಾರಕೀಶ್‌ ಅವರ ಅಭಿಮಾನಿಗಳು, ಚಿತ್ರರಂಗದ ತಂತ್ರಜ್ಞರು ಸೇರಿದಂತೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಂತಿಮ ದರ್ಶನ ಪಡೆದರು.

ದ್ವಾರಕೀಶ್‌ (82) ಅವರು ಹೃದಯಾಘಾತದಿಂದ ಮಂಗಳವಾರ ಗುಳಿಮಂಗಲದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಐದು ಮಂದಿ ಮಕ್ಕಳು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT