<p>‘ದಾರಿ ಯಾವುದಯ್ಯಾ ವೈಕುಂಠಕೆ’, ‘ಬ್ರಹ್ಮಕಮಲ’, ‘ತಾರಿಣಿ’ ಚಿತ್ರಗಳ ನಿರ್ದೇಶಕ ಸಿದ್ದು ಪೂರ್ಣಚಂದ್ರ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಹೊಸ ಸಿನಿಮಾದ ಶೀರ್ಷಿಕೆಯನ್ನು ನಿರ್ದೇಶಕ ಶಶಾಂಕ್ ಬಿಡುಗಡೆ ಮಾಡಿದರು. </p>.<p>‘ಈ ಪಾದ ಪುಣ್ಯಪಾದ’ ಎಂಬ ಚಿತ್ರವು ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿದೆ. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಕಥೆಯ ವಿಶೇಷವೇನೆಂದರೆ ಕಾಲುಗಳ ಮೇಲೆ ಕಥೆ ಬರೆಯಲಾಗಿದೆ. ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಮಗುವಿನ ಪಾದ, ದೊಡ್ಡವರ ಪಾದ, ವಯಸ್ಸಾದ ಪಾದ, ದಣಿದ ಪಾದ, ಖುಷಿಯ ಪಾದ, ಪಾಪದ ಪಾದ, ಆನೆಕಾಲು ರೋಗಿಯ ಪಾದ ಹೀಗೆ ನಾನಾ ಪಾದಗಳಿಂದ ಕೂಡಿದ ವಿನೂತನ ಕಥಾ ಹಂದರ ಹೊಂದಿರುವ ಚಿತ್ರ ಇದಾಗಿದೆ ಎಂದಿದ್ದಾರೆ ಸಿದ್ದು ಪೂರ್ಣಚಂದ್ರ. </p>.<p>ಮುಖ್ಯಪಾತ್ರದಲ್ಲಿ ಆಟೋ ನಾಗರಾಜ್, ಮಮತಾ ರಾಹುತ್, ಪ್ರಭಾಕರ್ ಬೋರೇಗೌಡ, ಪ್ರಮಿಳಾ ಸುಬ್ರಹ್ಮಣ್ಯಂ, ಹರೀಶ್ ಕುಂದೂರ್, ಸನ್ನಿ ಮುಂತಾದವರು ಇದ್ದಾರೆ. ರಾಜು ಹೆಮ್ಮಿಗೆಪುರ ಛಾಯಾಚಿತ್ರಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ದೀಪಕ್ ಅವರ ಸಂಕಲನ ಚಿತ್ರಕ್ಕಿದೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು ರಾಮನಗರ, ಚನ್ನಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ದಾರಿ ಯಾವುದಯ್ಯಾ ವೈಕುಂಠಕೆ’, ‘ಬ್ರಹ್ಮಕಮಲ’, ‘ತಾರಿಣಿ’ ಚಿತ್ರಗಳ ನಿರ್ದೇಶಕ ಸಿದ್ದು ಪೂರ್ಣಚಂದ್ರ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಹೊಸ ಸಿನಿಮಾದ ಶೀರ್ಷಿಕೆಯನ್ನು ನಿರ್ದೇಶಕ ಶಶಾಂಕ್ ಬಿಡುಗಡೆ ಮಾಡಿದರು. </p>.<p>‘ಈ ಪಾದ ಪುಣ್ಯಪಾದ’ ಎಂಬ ಚಿತ್ರವು ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿದೆ. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಕಥೆಯ ವಿಶೇಷವೇನೆಂದರೆ ಕಾಲುಗಳ ಮೇಲೆ ಕಥೆ ಬರೆಯಲಾಗಿದೆ. ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಮಗುವಿನ ಪಾದ, ದೊಡ್ಡವರ ಪಾದ, ವಯಸ್ಸಾದ ಪಾದ, ದಣಿದ ಪಾದ, ಖುಷಿಯ ಪಾದ, ಪಾಪದ ಪಾದ, ಆನೆಕಾಲು ರೋಗಿಯ ಪಾದ ಹೀಗೆ ನಾನಾ ಪಾದಗಳಿಂದ ಕೂಡಿದ ವಿನೂತನ ಕಥಾ ಹಂದರ ಹೊಂದಿರುವ ಚಿತ್ರ ಇದಾಗಿದೆ ಎಂದಿದ್ದಾರೆ ಸಿದ್ದು ಪೂರ್ಣಚಂದ್ರ. </p>.<p>ಮುಖ್ಯಪಾತ್ರದಲ್ಲಿ ಆಟೋ ನಾಗರಾಜ್, ಮಮತಾ ರಾಹುತ್, ಪ್ರಭಾಕರ್ ಬೋರೇಗೌಡ, ಪ್ರಮಿಳಾ ಸುಬ್ರಹ್ಮಣ್ಯಂ, ಹರೀಶ್ ಕುಂದೂರ್, ಸನ್ನಿ ಮುಂತಾದವರು ಇದ್ದಾರೆ. ರಾಜು ಹೆಮ್ಮಿಗೆಪುರ ಛಾಯಾಚಿತ್ರಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ದೀಪಕ್ ಅವರ ಸಂಕಲನ ಚಿತ್ರಕ್ಕಿದೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು ರಾಮನಗರ, ಚನ್ನಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>