<p><strong>ಬೆಂಗಳೂರು</strong>: ‘ಕಾಟೇರ’ ಚಿತ್ರದ ನಿರ್ದೇಶಕ ತರುಣ್ ಸುಧೀರ್, ಅಟ್ಲಾಂಟಾ ನಾಗೇಂದ್ರ ನಿರ್ಮಾಣದ, ಪುನೀತ್ ರಂಗಸ್ವಾಮಿ ನಿರ್ದೇಶನದ ಏಳುಮಲೆ ಚಿತ್ರ ಬಿಡುಗಡೆಯಾಗಿ ಎರಡನೇ ವಾರವೂ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಪಡೆದುಕೊಳ್ಳುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.</p><p>ಇದಕ್ಕೆ ಪೂರಕ ಎಂಬಂತೆ ಏಳುಮಲೆ ಕರ್ನಾಟಕದಾದ್ಯಂತ ₹3ಕೋಟಿಗೂ ಅಧಿಕ ಗಳಿಕೆ ಕಂಡು ಮುನ್ನುಗ್ಗುತ್ತಿದೆ ಎನ್ನಲಾಗಿದೆ. ತಮಿಳಿನಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಕುರಿತು ಕರ್ನಾಟಕ ಬಾಕ್ಸ್ ಆಫೀಸ್ ಮಾಹಿತಿ ಹಂಚಿಕೊಂಡಿದೆ. ಆದರೆ, ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.</p><p>ಇನ್ನೇನು ದಸರಾ ಹಬ್ಬದ ಸೀಸನ್ ಹಾಗೂ ದಸರಾ ರಜೆ ಶುರುವಾಗುವುದರಿಂದ ಏಳುಮಲೆ ಸಿನಿಮಾ ಇನ್ನೂ ಹೆಚ್ಚಿನ ಬಾಕ್ಸ್ ಆಫೀಸ್ ಗಳಿಕೆಯನ್ನು ನಿರೀಕ್ಷಿಸುತ್ತಿದೆ.</p><p>ಏಳುಮಲೆ ಸಿನಿಮಾ ಕನ್ನಡ, ತಮಿಳಿನಲ್ಲಿ ಸೆ.5ರಂದು ತೆರೆಕಂಡಿತ್ತು. ‘ಏಕ್ ಲವ್ ಯಾ’ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ನಟ ರಾಣಾ, ‘ಮಹಾನಟಿ’ ವಿಜೇತೆ ಪ್ರಿಯಾಂಕಾ ಆಚಾರ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. </p><p>ಜಗಪತಿ ಬಾಬು, ಟಿ.ಎಸ್. ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ‘ಏಳುಮಲೆ’ಯ ತಾರಾಬಳಗದಲ್ಲಿದ್ದಾರೆ. ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯನ್ನು ಥ್ರಿಲ್ಲರ್ ಮೂಲಕ ಹೊಂದಿರುವ ಈ ಸಿನಿಮಾಗೆ ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಡಿ. ಇಮ್ಮನ್ ಸಂಗೀತ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾಟೇರ’ ಚಿತ್ರದ ನಿರ್ದೇಶಕ ತರುಣ್ ಸುಧೀರ್, ಅಟ್ಲಾಂಟಾ ನಾಗೇಂದ್ರ ನಿರ್ಮಾಣದ, ಪುನೀತ್ ರಂಗಸ್ವಾಮಿ ನಿರ್ದೇಶನದ ಏಳುಮಲೆ ಚಿತ್ರ ಬಿಡುಗಡೆಯಾಗಿ ಎರಡನೇ ವಾರವೂ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಪಡೆದುಕೊಳ್ಳುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.</p><p>ಇದಕ್ಕೆ ಪೂರಕ ಎಂಬಂತೆ ಏಳುಮಲೆ ಕರ್ನಾಟಕದಾದ್ಯಂತ ₹3ಕೋಟಿಗೂ ಅಧಿಕ ಗಳಿಕೆ ಕಂಡು ಮುನ್ನುಗ್ಗುತ್ತಿದೆ ಎನ್ನಲಾಗಿದೆ. ತಮಿಳಿನಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಕುರಿತು ಕರ್ನಾಟಕ ಬಾಕ್ಸ್ ಆಫೀಸ್ ಮಾಹಿತಿ ಹಂಚಿಕೊಂಡಿದೆ. ಆದರೆ, ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.</p><p>ಇನ್ನೇನು ದಸರಾ ಹಬ್ಬದ ಸೀಸನ್ ಹಾಗೂ ದಸರಾ ರಜೆ ಶುರುವಾಗುವುದರಿಂದ ಏಳುಮಲೆ ಸಿನಿಮಾ ಇನ್ನೂ ಹೆಚ್ಚಿನ ಬಾಕ್ಸ್ ಆಫೀಸ್ ಗಳಿಕೆಯನ್ನು ನಿರೀಕ್ಷಿಸುತ್ತಿದೆ.</p><p>ಏಳುಮಲೆ ಸಿನಿಮಾ ಕನ್ನಡ, ತಮಿಳಿನಲ್ಲಿ ಸೆ.5ರಂದು ತೆರೆಕಂಡಿತ್ತು. ‘ಏಕ್ ಲವ್ ಯಾ’ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ನಟ ರಾಣಾ, ‘ಮಹಾನಟಿ’ ವಿಜೇತೆ ಪ್ರಿಯಾಂಕಾ ಆಚಾರ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. </p><p>ಜಗಪತಿ ಬಾಬು, ಟಿ.ಎಸ್. ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ‘ಏಳುಮಲೆ’ಯ ತಾರಾಬಳಗದಲ್ಲಿದ್ದಾರೆ. ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯನ್ನು ಥ್ರಿಲ್ಲರ್ ಮೂಲಕ ಹೊಂದಿರುವ ಈ ಸಿನಿಮಾಗೆ ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಡಿ. ಇಮ್ಮನ್ ಸಂಗೀತ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>