ಬೆಂಗಳೂರು: ನಟ ಮತ್ತು ಸಮಾಜಸೇವಕ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಆದರೆ, ಅವರ ಅಭಿಮಾನಿಗಳಿಗೆ ಇನ್ನೂ ಪುನೀತ್ ನೆನಪಿನಿಂದ ಹೊರಬರಲಾಗುತ್ತಿಲ್ಲ.
ಇದೇ ರೀತಿಯಲ್ಲಿ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಯೂ, ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತರೂ ಆಗಿರುವ ವ್ಯಕ್ತಿಯೊಬ್ಬರು, ಸನ್ನಿಧಾನದ ಮೆಟ್ಟಿಲು ಏರುವ ಸಂದರ್ಭದಲ್ಲಿ ಅಪ್ಪು ಫೋಟೊ ಹಿಡಿದುಕೊಂಡಿರುವ ವಿಡಿಯೊ ಒಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಅವರು ಟ್ವಿಟರ್ನಲ್ಲಿ ಈ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ಶಬರಿಮಲೆ ದರ್ಶನ ಆರಂಭವಾಗಿದ್ದು, ರಾಜ್ಯದಿಂದ ಸಾವಿರಾರು ಭಕ್ತರು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾರೆ.