<p><strong>ಬೆಂಗಳೂರು:</strong> ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಮೃತಪಟ್ಟಿರುವ ಫೈಟರ್ ವಿವೇಕ್ ಕುಟುಂಬಸ್ಥರಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.</p>.<p>ಸದ್ಯ ಅಜ್ಞಾತ ಸ್ಥಳದಿಂದ ತಮ್ಮ ಆಪ್ತರ ಮೂಲಕ ನಿರ್ಮಾಪಕ ಗುರು ದೇಶಪಾಂಡೆ ಭರವಸೆ ನೀಡಿದ್ದಾರೆ. ಘಟನೆಯ ಬಳಿಕ ಗುರು ಅವರು ತಲೆಮರೆಸಿಕೊಂಡಿದ್ದಾರೆ.</p>.<p>ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಜೋಗರದೊಡ್ಡಿಯಲ್ಲಿ ಸೋಮವಾರ ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ವಿವೇಕ್ ಎಂಬುವರು ಮೃತಪಟ್ಟಿದ್ದರು.</p>.<p><strong>ಕಠಿಣ ನಿಯಮ ಜಾರಿ: </strong>ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಇದಕ್ಕೆ ಸಂಬಂಧಿಸಿ ಕಠಿಣ ನಿಯಮಗಳನ್ನು ರೂಪಿಸಿ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/district/ramanagara/fighter-ravi-death-while-rachhu-i-love-you-kannada-movie-shooting-in-bidadi-856146.html" target="_blank"> ರಚಿತಾ ರಾಮ್-ಅಜಯ್ ರಾವ್ ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ಸ್ಪರ್ಶ; ಫೈಟರ್ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಮೃತಪಟ್ಟಿರುವ ಫೈಟರ್ ವಿವೇಕ್ ಕುಟುಂಬಸ್ಥರಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.</p>.<p>ಸದ್ಯ ಅಜ್ಞಾತ ಸ್ಥಳದಿಂದ ತಮ್ಮ ಆಪ್ತರ ಮೂಲಕ ನಿರ್ಮಾಪಕ ಗುರು ದೇಶಪಾಂಡೆ ಭರವಸೆ ನೀಡಿದ್ದಾರೆ. ಘಟನೆಯ ಬಳಿಕ ಗುರು ಅವರು ತಲೆಮರೆಸಿಕೊಂಡಿದ್ದಾರೆ.</p>.<p>ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಜೋಗರದೊಡ್ಡಿಯಲ್ಲಿ ಸೋಮವಾರ ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ವಿವೇಕ್ ಎಂಬುವರು ಮೃತಪಟ್ಟಿದ್ದರು.</p>.<p><strong>ಕಠಿಣ ನಿಯಮ ಜಾರಿ: </strong>ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಇದಕ್ಕೆ ಸಂಬಂಧಿಸಿ ಕಠಿಣ ನಿಯಮಗಳನ್ನು ರೂಪಿಸಿ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/district/ramanagara/fighter-ravi-death-while-rachhu-i-love-you-kannada-movie-shooting-in-bidadi-856146.html" target="_blank"> ರಚಿತಾ ರಾಮ್-ಅಜಯ್ ರಾವ್ ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ಸ್ಪರ್ಶ; ಫೈಟರ್ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>