ಈ ಕುರಿತು ಮಂಡಳಿ ಅಧ್ಯಕ್ಷರಿಗೆ ಮಂಜುನಾಥ ಸಿಂಗ್ ಆದೇಶ ಪ್ರತಿ ರವಾನಿಸಿದ್ದಾರೆ. ಚುನಾವಣೆ ನಡೆಸದೇ ಇದ್ದಲ್ಲಿ, ಈಗಾಗಲೇ ಸಮಿತಿಯ ಅವಧಿ ಮುಗಿದಿರುವ ಕಾರಣ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಲಭ್ಯವಿರುವ ಮತದಾರರ ಪಟ್ಟಿಯನ್ವಯ ಕೂಡಲೇ ಚುನಾವಣೆ ನಡೆಸಲು ಸೂಚಿಸಲಾಗಿದ್ದು, ತಕ್ಷಣವೇ ಈ ಕುರಿತು ವರದಿ ಸಲ್ಲಿಸಲೂ ಆದೇಶಿಸಲಾಗಿದೆ.