<p><strong>ಬೆಂಗಳೂರು: </strong>ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಕ್ರಮೇಣವಾಗಿ ಸಡಿಲಗೊಳಿಸಲಾಗುತ್ತಿದ್ದು, ಒಳಾಂಗಣದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ಈ ಮನವಿ ಸಲ್ಲಿಸಿದ್ದಾರೆ. ‘ಕೋವಿಡ್ –19 ಎರಡನೇ ಅಲೆ ಹಿನ್ನೆಲೆಯಲ್ಲಿ ಚಲನಚಿತ್ರೋದ್ಯಮದ ಪರವಾಗಿ ವಾಣಿಜ್ಯ ಮಂಡಳಿಯು ಮಾಡಿಕೊಂಡ ಮನವಿಯ ಮೇರೆಗೆ ತಾವು ಸ್ಪಂದಿಸಿ, ಹೊರಾಂಗಣ ಚಲನಚಿತ್ರ ಚಿತ್ರೀಕರಣಕ್ಕೆ ಅನುಮತಿ ನೀಡಿರುವಿರಿ. ಅದಕ್ಕಾಗಿ ವಾಣಿಜ್ಯ ಮಂಡಳಿಯ ಪರವಾಗಿ ತಮಗೆ ಧನ್ಯವಾದಗಳು’.</p>.<p>‘ಚಿತ್ರೋದ್ಯಮದಲ್ಲಿ ಈಗಾಗಲೇ ಸಾಕಷ್ಟು ಚಲನಚಿತ್ರಗಳ ಚಿತ್ರೀಕರಣವು ಅರ್ಧಕ್ಕೆ ನಿಂತುಹೋಗಿದ್ದು, ಮತ್ತಷ್ಟು ಚಲನಚಿತ್ರಗಳ ನಿರ್ಮಾಪಕರು ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಒಳಾಂಗಣದಲ್ಲಿ ಚಿತ್ರೀಕರಿಸಲು ಸೆಟ್ಗಳನ್ನು ಅಳವಡಿಸಿಕೊಂಡಿದ್ದು, ಆ ಸೆಟ್ಗಳೆಲ್ಲವೂ ದುಃಸ್ಥಿತಿಗೆ ಬರುತ್ತಿವೆ. ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿಯೂ ಕೂಡಾ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ಅಳವಡಿಸಿ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಿರುವಂತೆ ಈಗಲೂ ಅವಕಾಶ ನೀಡಬೇಕು. ಈ ರೀತಿ ಅನುವು ಮಾಡಿಕೊಟ್ಟರೆ ನಿರ್ಮಾಪಕರು ಮತ್ತು ಉದ್ಯಮವನ್ನೇ ನಂಬಿಕೊಂಡಿರುವ ಸಾವಿರಾರು ಕಾರ್ಮಿಕರುಗಳಿಗೆ ಉದ್ಯೋಗ ದೊರೆಯುವುದಲ್ಲೇ ಜೀವನ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಂತಾಗುತ್ತದೆ. ಸರ್ಕಾರದ ಷರತ್ತುಗಳಿಗೆ ಒಳಪಟ್ಟು ಒಳಾಂಗಣ ಚಿತ್ರೀಕರಣ ಮಾಡಲು ನಾವು ಬದ್ಧರಾಗಿರುತ್ತೇವೆ’ ಎಂದು ಜೈರಾಜ್ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಕ್ರಮೇಣವಾಗಿ ಸಡಿಲಗೊಳಿಸಲಾಗುತ್ತಿದ್ದು, ಒಳಾಂಗಣದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ಈ ಮನವಿ ಸಲ್ಲಿಸಿದ್ದಾರೆ. ‘ಕೋವಿಡ್ –19 ಎರಡನೇ ಅಲೆ ಹಿನ್ನೆಲೆಯಲ್ಲಿ ಚಲನಚಿತ್ರೋದ್ಯಮದ ಪರವಾಗಿ ವಾಣಿಜ್ಯ ಮಂಡಳಿಯು ಮಾಡಿಕೊಂಡ ಮನವಿಯ ಮೇರೆಗೆ ತಾವು ಸ್ಪಂದಿಸಿ, ಹೊರಾಂಗಣ ಚಲನಚಿತ್ರ ಚಿತ್ರೀಕರಣಕ್ಕೆ ಅನುಮತಿ ನೀಡಿರುವಿರಿ. ಅದಕ್ಕಾಗಿ ವಾಣಿಜ್ಯ ಮಂಡಳಿಯ ಪರವಾಗಿ ತಮಗೆ ಧನ್ಯವಾದಗಳು’.</p>.<p>‘ಚಿತ್ರೋದ್ಯಮದಲ್ಲಿ ಈಗಾಗಲೇ ಸಾಕಷ್ಟು ಚಲನಚಿತ್ರಗಳ ಚಿತ್ರೀಕರಣವು ಅರ್ಧಕ್ಕೆ ನಿಂತುಹೋಗಿದ್ದು, ಮತ್ತಷ್ಟು ಚಲನಚಿತ್ರಗಳ ನಿರ್ಮಾಪಕರು ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಒಳಾಂಗಣದಲ್ಲಿ ಚಿತ್ರೀಕರಿಸಲು ಸೆಟ್ಗಳನ್ನು ಅಳವಡಿಸಿಕೊಂಡಿದ್ದು, ಆ ಸೆಟ್ಗಳೆಲ್ಲವೂ ದುಃಸ್ಥಿತಿಗೆ ಬರುತ್ತಿವೆ. ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿಯೂ ಕೂಡಾ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ಅಳವಡಿಸಿ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಿರುವಂತೆ ಈಗಲೂ ಅವಕಾಶ ನೀಡಬೇಕು. ಈ ರೀತಿ ಅನುವು ಮಾಡಿಕೊಟ್ಟರೆ ನಿರ್ಮಾಪಕರು ಮತ್ತು ಉದ್ಯಮವನ್ನೇ ನಂಬಿಕೊಂಡಿರುವ ಸಾವಿರಾರು ಕಾರ್ಮಿಕರುಗಳಿಗೆ ಉದ್ಯೋಗ ದೊರೆಯುವುದಲ್ಲೇ ಜೀವನ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಂತಾಗುತ್ತದೆ. ಸರ್ಕಾರದ ಷರತ್ತುಗಳಿಗೆ ಒಳಪಟ್ಟು ಒಳಾಂಗಣ ಚಿತ್ರೀಕರಣ ಮಾಡಲು ನಾವು ಬದ್ಧರಾಗಿರುತ್ತೇವೆ’ ಎಂದು ಜೈರಾಜ್ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>