<p>ಎಸ್ ನಾರಾಯಣ್ ನಿರ್ದೇಶನದ ‘ಮಾರುತ’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ದುನಿಯಾ ವಿಜಯ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಕಾಂಬಿನೇಶನ್ನಲ್ಲಿ ಮೂರನೇ ಚಿತ್ರ ಇದಾಗಿದೆ. ಈ ಹಿಂದೆ ಇವರಿಬ್ಬರು ಒಟ್ಟಾಗಿ ‘ಚಂಡ’, ‘ದಕ್ಷ’ ಚಿತ್ರಗಳನ್ನು ನೀಡಿದ್ದರು.</p>.<p>ಶ್ರೇಯಸ್ ಕೆ ಮಂಜು ಕೂಡ ಪ್ರಮುಖ ಪಾತ್ರದಲ್ಲಿರುವ ಚಿತ್ರಕ್ಕೆ ಕೆ.ಮಂಜು ಹಾಗೂ ರಮೇಶ್ ಯಾದವ್ ಬಂಡವಾಳ ಹೂಡಿದ್ದಾರೆ. ಬೃಂದಾ ಚಿತ್ರದ ನಾಯಕಿ. </p>.<p>‘ಮಾರುತ’ ಕಂಟೆಂಟ್ ಆಧಾರಿತ ಚಿತ್ರ. ಇದು ಸಾಮಾನ್ಯರ ಕಥೆ. ಪ್ರತಿ ಮನೆಯಲ್ಲಿ ನಡೆಯುವ ಘಟನೆಗಳೇ ಚಿತ್ರವಾಗಿದೆ. ನಮಗೆ ಗೊತ್ತಿಲ್ಲದ ಹಾಗೆ ನಮ್ಮನ್ನೆಲ್ಲ ಅವರಿಸಿಕೊಂಡಿರುವ ಭೂತ ಈ ಮಾರುತ. ಅದರಿಂದ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳೇನು? ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ’ ಎಂದಿದ್ದಾರೆ ನಿರ್ದೇಶಕರು. </p>.<p>ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ ಮೊದಲಾದವರು ಚಿತ್ರದಲ್ಲಿದ್ದು, ವಿಶೇಷಪಾತ್ರದಲ್ಲಿ ರವಿಚಂದ್ರನ್ ಕಾಣಿಸಿಕೊಂಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಸ್ ನಾರಾಯಣ್ ನಿರ್ದೇಶನದ ‘ಮಾರುತ’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ದುನಿಯಾ ವಿಜಯ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಕಾಂಬಿನೇಶನ್ನಲ್ಲಿ ಮೂರನೇ ಚಿತ್ರ ಇದಾಗಿದೆ. ಈ ಹಿಂದೆ ಇವರಿಬ್ಬರು ಒಟ್ಟಾಗಿ ‘ಚಂಡ’, ‘ದಕ್ಷ’ ಚಿತ್ರಗಳನ್ನು ನೀಡಿದ್ದರು.</p>.<p>ಶ್ರೇಯಸ್ ಕೆ ಮಂಜು ಕೂಡ ಪ್ರಮುಖ ಪಾತ್ರದಲ್ಲಿರುವ ಚಿತ್ರಕ್ಕೆ ಕೆ.ಮಂಜು ಹಾಗೂ ರಮೇಶ್ ಯಾದವ್ ಬಂಡವಾಳ ಹೂಡಿದ್ದಾರೆ. ಬೃಂದಾ ಚಿತ್ರದ ನಾಯಕಿ. </p>.<p>‘ಮಾರುತ’ ಕಂಟೆಂಟ್ ಆಧಾರಿತ ಚಿತ್ರ. ಇದು ಸಾಮಾನ್ಯರ ಕಥೆ. ಪ್ರತಿ ಮನೆಯಲ್ಲಿ ನಡೆಯುವ ಘಟನೆಗಳೇ ಚಿತ್ರವಾಗಿದೆ. ನಮಗೆ ಗೊತ್ತಿಲ್ಲದ ಹಾಗೆ ನಮ್ಮನ್ನೆಲ್ಲ ಅವರಿಸಿಕೊಂಡಿರುವ ಭೂತ ಈ ಮಾರುತ. ಅದರಿಂದ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳೇನು? ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ’ ಎಂದಿದ್ದಾರೆ ನಿರ್ದೇಶಕರು. </p>.<p>ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ ಮೊದಲಾದವರು ಚಿತ್ರದಲ್ಲಿದ್ದು, ವಿಶೇಷಪಾತ್ರದಲ್ಲಿ ರವಿಚಂದ್ರನ್ ಕಾಣಿಸಿಕೊಂಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>