ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗ್ರಾಮದವರಾದ, ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ದಿನೇಶ್ ಗಾಂಧಿ (51), ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ ಪತ್ನಿ ಗಿರಿಜಾ, ಪುತ್ರ ಹಾಗೂ ಪುತ್ರಿ ಇದ್ದಾರೆ.
‘ಚೆಲುವಿ’, ‘ವೀರ ಮದಕರಿ’, ‘ಹೂ’, ‘ಮಲ್ಲಿಕಾರ್ಜುನ’ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ನಗುವನಹಳ್ಳಿ ಯಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು. ನಿರ್ಮಾಪಕರಾದ ಸಾ.ರಾ. ಗೋವಿಂದು, ಸುರೇಶ್, ಗಣೇಶ್ ಭಾಗವಹಿಸಿದ್ದರು.