ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶ್‌ ಅಭಿನಯದ ’ಕಿರಾತಕ’ ಚಿತ್ರ ನಿರ್ದೇಶಕ ಪ್ರದೀಪ್‌ ರಾಜ್‌ ಕೋವಿಡ್‌ನಿಂದ ನಿಧನ

Last Updated 20 ಜನವರಿ 2022, 5:50 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ಚಿತ್ರ ನಿರ್ದೇಶಕ ಪ್ರದೀಪ್‌ ರಾಜ್‌ (46) ಅವರು ಗುರುವಾರ ನಸುಕಿನಲ್ಲಿ ಕೋವಿಡ್‌ ಸೋಂಕಿನಿಂದ ನಿಧನರಾದರು.

ಮಧುಮೇಹ, ಯಕೃತ್ತು ಸೇರಿದಂತೆ ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ತೀವ್ರ ಅಸ್ವಸ್ಥರಾಗಿ ಪಾಂಡಿಚೆರಿಯ ಆಸ್ಪತ್ರೆಗೆ ದಾಖಲಾಗಿದ್ದರು. ಯಕೃತ್ತನ್ನು ಕಸಿ ಮಾಡುವ ಪ್ರಯತ್ನವೂ ನಡೆದಿತ್ತು. ಅದೂ ಲಭ್ಯವಾಗಿಲ್ಲ. ಇಂದು ಪಾಂಡಿಚೆರಿಯ ಆಸ್ಪತ್ರೆಯಲ್ಲೇ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಕಿರಾತಕ, ಅಂಜದಗಂಡು, ಬೆಂಗಳೂರು – 23, ಮಿಸ್ಟರ್‌ 420, ರಜನಿಕಾಂತ ಚಿತ್ರಗಳನ್ನು ನಿರ್ದೇಶಿಸಿದ್ದರು. ಕಿರಾತಕ – 2 ಕೂಡಾ ನಿರ್ಮಾಣಗೊಂಡು ಬಿಡುಗಡೆಗೆ ಸಿದ್ಧವಾಗಿತ್ತು.

ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3ಕ್ಕೆ ಪಾಂಡಿಚೆರಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT