ಇಪ್ಪತ್ತು ವರ್ಷಗಳ ಹಿಂದೆ ಈಶಾನ್ಯ ಭಾಗದ ಜನರು, ವಿದ್ಯಾರ್ಥಿಗಳು ದೆಹಲಿಗೆ ಹೋಗುತ್ತಿರಲಿಲ್ಲ. ಬೆಂಗಳೂರಿಗಂತೂ ಬರುತ್ತಿರಲಿಲ್ಲ. ಅಲ್ಲಿಗೆ ಭೇಟಿ ನೀಡಿದರೂ ದೆಹಲಿಯ ಜನರು ನಮ್ಮನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಇದಕ್ಕೆ ಹಲವು ಕಾರಣಗಳಿವೆ.ಈಗಿನ ಯುವಜನರು ಸುಶಿಕ್ಷಿತರಾಗಿದ್ದಾರೆ. ದೇಶದ ಎಲ್ಲ ರಾಜ್ಯಗಳಲ್ಲೂ ಶಿಕ್ಷಣ ಸೇರಿದಂತೆ ವಿವಿಧ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.