<p>ಮರ್ಡರ್ ಮಿಸ್ಟ್ರಿ ಕಥಾಹಂದರವಿರುವ ‘ಕೌಂತೇಯ’ ಚಿತ್ರದಲ್ಲಿ ಮನೋರಂಜನ್ ರವಿಚಂದ್ರನ್ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿ.ಕೆ.ಚಂದ್ರಹಾಸ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿರುವ ಚಿತ್ರದ ಶೇಕಡ 70ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಚಿತ್ರತಂಡ ಹೇಳಿದೆ. </p>.<p>ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಚಿತ್ರ ಮೈಸೂರಿನ ಸುತ್ತಮುತ್ತ ಚಿತ್ರೀಕರಣಗೊಳ್ಳುತ್ತಿದೆ. ‘ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್ ಸಕಾರಾತ್ಮಕ ಪಾತ್ರದಲ್ಲಿ ಕಾಣಿಸಿಕೊಂಡರೆ, ಇದೇ ಮೊದಲ ಬಾರಿಗೆ ಮನೋರಂಜನ್ ಖಳನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅವರ ಗೆಟಪ್ ಸಹ ಭಿನ್ನವಾಗಿದ್ದು, ಯಾಕಾಗಿ ಅವರು ಈ ಪಾತ್ರ ನಿಭಾಯಿಸುತ್ತಿದ್ದಾರೆ ಎಂಬುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದಿದ್ದಾರೆ ನಿರ್ದೇಶಕ.</p>.<p>ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ. </p>.<p>ಸುರೇಶ್ ಕುಮಾರ್ ಬಂಡವಾಳ ಹೂಡಿದ್ದಾರೆ. ಹರಿ. ಪಿ.ಎಲ್.ರವಿ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.</p>.<p>‘ಕೌಂತೇಯ ಅಂದರೆ ಕುಂತಿಪುತ್ರ ಎಂದರ್ಥ. ಈ ಚಿತ್ರದಲ್ಲಿ ಕೌಂತೇಯ ಯಾರು ಎಂಬುದೇ ಕುತೂಹಲದ ಸಂಗತಿ. ಮರ್ಡರ್ ಮಿಸ್ಟ್ರಿ ಕಥೆಯನ್ನು ಕೌತುಕವಾಗಿ ತೆಗೆದುಕೊಂಡು ಹೋಗಿದ್ದೇವೆ. ನಿರೂಪಣೆಯಲ್ಲೂ ಭಿನ್ನತೆ ಇದೆ’ ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರ್ಡರ್ ಮಿಸ್ಟ್ರಿ ಕಥಾಹಂದರವಿರುವ ‘ಕೌಂತೇಯ’ ಚಿತ್ರದಲ್ಲಿ ಮನೋರಂಜನ್ ರವಿಚಂದ್ರನ್ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿ.ಕೆ.ಚಂದ್ರಹಾಸ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿರುವ ಚಿತ್ರದ ಶೇಕಡ 70ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಚಿತ್ರತಂಡ ಹೇಳಿದೆ. </p>.<p>ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಚಿತ್ರ ಮೈಸೂರಿನ ಸುತ್ತಮುತ್ತ ಚಿತ್ರೀಕರಣಗೊಳ್ಳುತ್ತಿದೆ. ‘ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್ ಸಕಾರಾತ್ಮಕ ಪಾತ್ರದಲ್ಲಿ ಕಾಣಿಸಿಕೊಂಡರೆ, ಇದೇ ಮೊದಲ ಬಾರಿಗೆ ಮನೋರಂಜನ್ ಖಳನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅವರ ಗೆಟಪ್ ಸಹ ಭಿನ್ನವಾಗಿದ್ದು, ಯಾಕಾಗಿ ಅವರು ಈ ಪಾತ್ರ ನಿಭಾಯಿಸುತ್ತಿದ್ದಾರೆ ಎಂಬುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದಿದ್ದಾರೆ ನಿರ್ದೇಶಕ.</p>.<p>ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ. </p>.<p>ಸುರೇಶ್ ಕುಮಾರ್ ಬಂಡವಾಳ ಹೂಡಿದ್ದಾರೆ. ಹರಿ. ಪಿ.ಎಲ್.ರವಿ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.</p>.<p>‘ಕೌಂತೇಯ ಅಂದರೆ ಕುಂತಿಪುತ್ರ ಎಂದರ್ಥ. ಈ ಚಿತ್ರದಲ್ಲಿ ಕೌಂತೇಯ ಯಾರು ಎಂಬುದೇ ಕುತೂಹಲದ ಸಂಗತಿ. ಮರ್ಡರ್ ಮಿಸ್ಟ್ರಿ ಕಥೆಯನ್ನು ಕೌತುಕವಾಗಿ ತೆಗೆದುಕೊಂಡು ಹೋಗಿದ್ದೇವೆ. ನಿರೂಪಣೆಯಲ್ಲೂ ಭಿನ್ನತೆ ಇದೆ’ ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>