ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ ರಮೇಶ್ ರೆಡ್ಡಿ ಚಿತ್ರವನ್ನು ನಿರ್ಮಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನವಿದೆ. ‘ಶಿವರಾಜ್ಕುಮಾರ್ ಚುನಾವಣೆ ಪ್ರಚಾರಕ್ಕೆ ತೆರೆಳಿರುವುದರಿಂದ ಚಿತ್ರೀಕರಣ ನಿಂತಿತ್ತು. ಈಗಾಗಲೇ ನಾಲ್ಕು ಹಂತಗಳ ಚಿತ್ರೀಕರಣ ಪೂರ್ಣಗೊಂಡಿದ್ದು, ಇನ್ನೆರಡು ಹಂತದ ಚಿತ್ರೀಕರಣ ಬಾಕಿಯಿದೆ. ಎಲ್ಲ ನಟರ ಡೇಟ್ ಹೊಂದಾಣಿಕೆ ಸಮಸ್ಯೆಯಿಂದ ಚಿತ್ರೀಕರಣ ಅಂದುಕೊಂಡಷ್ಟು ವೇಗವಾಗಿ ನಡೆದಿಲ್ಲ. ಚಿತ್ರದಲ್ಲಿ ಸಾಕಷ್ಟು ಗ್ರಾಫಿಕ್ಸ್ ಇದ್ದು, ಬೆಂಗಳೂರು, ಹೈದ್ರಾಬಾದ್, ಲಂಡನ್ಗಳಲ್ಲಿ ಇದರ ಕೆಲಸ ನಡೆಯುತ್ತಿದೆ’ ಎನ್ನುತ್ತಾರೆ ನಿರ್ಮಾಪಕ ರಮೇಶ್ ರೆಡ್ಡಿ.