ಚಿತ್ರರಂಗದ ಹಲವು ವಿಭಾಗಗಳಲ್ಲಿ ಕೆಲಸ ಮಾಡಿರುವ ಓಂಪ್ರತಾಪ್ ಎಚ್. ಈ ಸಿನಿಮಾಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಬಿ.ಚಂದಿರಧರ ಪಿನ್ನೇನಹಳ್ಳಿ ತಂದೆಯ ಪಾತ್ರಕ್ಕೆ ಬಣ್ಣ ಹಚ್ಚುವ ಜೊತೆಗೆ ಬಂಡವಾಳ ಹೂಡುತ್ತಿದ್ದಾರೆ.
‘ಮೊದಲು ‘ಜನಕ’ ಎಂಬ ಹೆಸರನ್ನು ಇಡಲಾಗಿತ್ತು. ಆದರೆ ಆ ಟೈಟಲ್ ಸಿಗಲಿಲ್ಲ. ಹೀಗಾಗಿ ‘ಅಪ್ಪಾಜಿ’ ಶೀರ್ಷಿಕೆಯಾಯ್ತು. ಅಪ್ಪನಾದವನು ಮಕ್ಕಳ ಮೇಲೆ ತೋರಿಸುವ ಪ್ರೀತಿ, ಆತನ ಜವಾಬ್ದಾರಿ ಮುಂತಾದ ಅಂಶಗಳು ಚಿತ್ರದಲ್ಲಿರಲಿದೆ. ಒಂದು ಹಂತದಲ್ಲಿ ತನಗಾದ ನೋವು, ಅನ್ಯಾಯಗಳನ್ನು ಹೇಗೆ ತೀರಿಸಿಕೊಳ್ಳುತ್ತಾನೆ ಎಂಬುದನ್ನು ಭಾವನಾತ್ಮಕವಾಗಿ ತೋರಿಸಲಾಗುತ್ತಿದೆ. ತುಮಕೂರು, ದಾಬಸ್ಪೇಟೆ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಆಲೋಚನೆಯಿದೆ’ ಎಂದರು ನಿರ್ದೇಶಕರು.