ಈ ಹಿಂದೆ ‘ಗಿರ್ಕಿ’ ಚಿತ್ರದಲ್ಲಿ ನಟಿಸಿದ್ದ ವಿಲೋಕ್ ರಾಜ್ ಈ ಚಿತ್ರದ ನಾಯಕ. ಶಿಲ್ಪ ಕಾಮತ್ ನಾಯಕಿ. ‘ಇದೊಂದು ಗ್ರಾಮೀಣ ಸೊಗಡಿನ ಕಥೆಯಾಗಿದ್ದು, ಪುತ್ತೂರು, ಸುಳ್ಯ ಭಾಗದ ಭಾಷೆ, ಸೊಗಡು, ಆಚಾರ, ವಿಚಾರ, ಕಲೆ, ಬದುಕಿನ ಸುತ್ತಲಿನ ಕಥೆ. ‘ರಂಗಸ್ಥಳ’ ಎಂದರೆ ಒಂದು ವೇದಿಕೆ. ರಂಗ ಕಲೆಗಳ ಪ್ರದರ್ಶನ ನಡೆಯುವ ಸ್ಥಳ. ಇಲ್ಲಿ ಬರುವ ಪಾತ್ರಧಾರಿಗಳು ಒಬ್ಬೊಬ್ಬರದು ಒಂದೊಂದು ರೀತಿಯ ಮನಸ್ಥಿತಿ. ಅದು ಹೇಗೆ, ಯಾವ ರೀತಿ, ಏನೆಲ್ಲಾ ತೊಂದರೆಗಳನ್ನು ನೀಡುತ್ತದೆ. ಈ ರಂಗ ಮಂಟಪದಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಮಾಡಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಈಶ್ವರ್ ನಿತಿನ್.