<p>ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕತರೆಲ್ಲ ಒಟ್ಟಾಗಿ ಸಿದ್ಧಪಡಿಸಿರುವ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ್ ಎಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. </p>.<p>‘ಇದೊಂದು ಕ್ರೈಮ್ ಜಾನರ್ ಕುರಿತಾದ ಚಿತ್ರ. ತನಿಖೆಯೊಂದರ ಸುತ್ತ ನಡೆಯುವ ಕಥೆ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಾಗುವ ಕಥೆ ಸಾಕಷ್ಟು ತಿರುವುಗಳನ್ನು ಪಡೆಯುತ್ತಾ ಹೋಗುತ್ತದೆ. ಮುಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕರು.</p>.<p>ಮಹಿನ್ ಕುಬೇರ್, ಮುತ್ತುರಾಜ್ ಟಿ, ನಟ ಗಗನ್, ಚಿಂತನ್ ಕಂಬಣ್ಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಮತ್ತು ಕನಕಪುರದಲ್ಲಿ ಚಿತ್ರೀಕರಣವಾಗಿದೆ.</p>.<p>ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಚಿತ್ರಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೊನೆಯ ಹಂತದಲ್ಲಿದ್ದು, ಆಗಸ್ಟ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕತರೆಲ್ಲ ಒಟ್ಟಾಗಿ ಸಿದ್ಧಪಡಿಸಿರುವ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ್ ಎಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. </p>.<p>‘ಇದೊಂದು ಕ್ರೈಮ್ ಜಾನರ್ ಕುರಿತಾದ ಚಿತ್ರ. ತನಿಖೆಯೊಂದರ ಸುತ್ತ ನಡೆಯುವ ಕಥೆ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಾಗುವ ಕಥೆ ಸಾಕಷ್ಟು ತಿರುವುಗಳನ್ನು ಪಡೆಯುತ್ತಾ ಹೋಗುತ್ತದೆ. ಮುಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕರು.</p>.<p>ಮಹಿನ್ ಕುಬೇರ್, ಮುತ್ತುರಾಜ್ ಟಿ, ನಟ ಗಗನ್, ಚಿಂತನ್ ಕಂಬಣ್ಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಮತ್ತು ಕನಕಪುರದಲ್ಲಿ ಚಿತ್ರೀಕರಣವಾಗಿದೆ.</p>.<p>ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಚಿತ್ರಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೊನೆಯ ಹಂತದಲ್ಲಿದ್ದು, ಆಗಸ್ಟ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>