<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ರಣ ರಾಕ್ಷಸ’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮುರಳಿಪ್ರಸಾದ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹೆಚ್.ಪಿ.ನರಸಿಂಹಸ್ವಾಮಿ ಬಂಡವಾಳ ಹೂಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.</p>.<p>‘ತಂದೆ ಮಗಳ ಸಂಬಂಧವನ್ನು ಹೇಳುವ ಕಥೆ. ಚಿತ್ರ ಸೆನ್ಸಾರ್ ಮುಗಿಸಿ, ಬಿಡುಗಡೆಗೆ ಸಿದ್ಧವಿದೆ. ಇದೇ ತಿಂಗಳು ತೆರೆಗೆ ತರುವ ಆಲೋಚನೆಯಿದೆ. ಬೆಂಗಳೂರು, ಹೆಸರುಘಟ್ಟ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ’ ಎಂದರು ನಿರ್ದೇಶಕರು.</p>.<p>‘ನಮ್ಮ ತಂದೆ ರಂಗಭೂಮಿ ಕಲಾವಿದರು. ಅವರ ಬಳುವಳಿಯಿಂದಲೇ ನನಗೂ ಚಿಕ್ಕ ವಯಸ್ಸಿಗೆ ಅಭಿನಯದ ಗೀಳು ಹುಟ್ಟಿಕೊಂಡಿತು. ನಂತರ ಉದ್ಯಮದಲ್ಲಿ ಯಶಸ್ಸು ಕಂಡು ಚಿತ್ರಮಂದಿರದ ಮಾಲೀಕನಾದೆ. ಇದೆಲ್ಲದರ ಅನುಭವದಿಂದ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡಿ, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದೇನೆ’ ಎಂದರು ಹೆಚ್.ಪಿ.ನರಸಿಂಹಸ್ವಾಮಿ.</p>.<p>ಪುಣ್ಯ ಗೌಡ, ದತ್ತ, ದಿಲೀಪ್ ಮುಂತಾದವರು ನಟಿಸಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಸಂಗೀತವನ್ನೂ ನೀಡಿದ್ದಾರೆ. ಭಾರ್ಗವ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ರಣ ರಾಕ್ಷಸ’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮುರಳಿಪ್ರಸಾದ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹೆಚ್.ಪಿ.ನರಸಿಂಹಸ್ವಾಮಿ ಬಂಡವಾಳ ಹೂಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.</p>.<p>‘ತಂದೆ ಮಗಳ ಸಂಬಂಧವನ್ನು ಹೇಳುವ ಕಥೆ. ಚಿತ್ರ ಸೆನ್ಸಾರ್ ಮುಗಿಸಿ, ಬಿಡುಗಡೆಗೆ ಸಿದ್ಧವಿದೆ. ಇದೇ ತಿಂಗಳು ತೆರೆಗೆ ತರುವ ಆಲೋಚನೆಯಿದೆ. ಬೆಂಗಳೂರು, ಹೆಸರುಘಟ್ಟ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ’ ಎಂದರು ನಿರ್ದೇಶಕರು.</p>.<p>‘ನಮ್ಮ ತಂದೆ ರಂಗಭೂಮಿ ಕಲಾವಿದರು. ಅವರ ಬಳುವಳಿಯಿಂದಲೇ ನನಗೂ ಚಿಕ್ಕ ವಯಸ್ಸಿಗೆ ಅಭಿನಯದ ಗೀಳು ಹುಟ್ಟಿಕೊಂಡಿತು. ನಂತರ ಉದ್ಯಮದಲ್ಲಿ ಯಶಸ್ಸು ಕಂಡು ಚಿತ್ರಮಂದಿರದ ಮಾಲೀಕನಾದೆ. ಇದೆಲ್ಲದರ ಅನುಭವದಿಂದ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡಿ, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದೇನೆ’ ಎಂದರು ಹೆಚ್.ಪಿ.ನರಸಿಂಹಸ್ವಾಮಿ.</p>.<p>ಪುಣ್ಯ ಗೌಡ, ದತ್ತ, ದಿಲೀಪ್ ಮುಂತಾದವರು ನಟಿಸಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಸಂಗೀತವನ್ನೂ ನೀಡಿದ್ದಾರೆ. ಭಾರ್ಗವ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>