ಕಿಶೋರ್ ಶೆಟ್ಟಿ ನಿರ್ಮಾಣದ ಈ ಚಿತ್ರವನ್ನು ಜಿ.ಕೆ. ಆದಿ ನಿರ್ದೇಶಿಸಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಹಣ, ಎ.ಎಂ. ನೀಲ್ ಸಂಗೀತ ಚಿತ್ರಕ್ಕಿದೆ. ಸೂರ್ಯಪ್ರಭ್, ರಕ್ಷತಾ ಮಲ್ನಾಡ್, ಶೋಭರಾಜ್, ಗಿರೀಶ್, ಮೈಕೋ ಮಂಜು, ಸಿಲ್ವಾಮೂರ್ತಿ, ಹಂಸಾ, ಸೂರ್ಯಕಿರಣ್, ಪಲ್ಲವಿ ಶೆಟ್ಟಿ, ಎಚ್.ಎಂ.ಟಿ. ವಿಜಿ, ರಂಗಾಯಣ ರಘು ತಾರಾಗಣದಲ್ಲಿ ಇದ್ದಾರೆ. ನೈಜ ಘಟನೆಯನ್ನು ಆಧರಿಸಿ ಚಿತ್ರದ ಕಥೆ ಹೆಣೆಯಲಾಗಿದೆ ಎಂದು ಚಿತ್ರತಂಡ ಹೇಳಿದೆ.