ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ‘ಕಾಂತಾರ‘ ಚಿತ್ರವನ್ನು ವೀಕ್ಷಿಸಿದ್ದಾರೆ.
ಚಿತ್ರ ವೀಕ್ಷಿಸಿದ ಬಳಿಕ ಅವರು ಟ್ವೀಟ್ ಮಾಡಿದ್ದು, ತಂಡಕ್ಕೆ ಶುಭ ಕೋರಿದ್ದಾರೆ.
ರಿಷಬ್ ಶೆಟ್ಟಿಯವರ ನಿರ್ದೇಶನದಲ್ಲಿ ಮೂಡಿಬಂದ ಕಾಂತಾರ ಚಿತ್ರವನ್ನು ವೀಕ್ಷಿಸಿದೆ. ಈ ಚಿತ್ರ ತುಳುವನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಯನ್ನು ತುಂಬಾ ಚೆನ್ನಾಗಿ ಪ್ರಸ್ತುತಪಡಿಸಿದೆ ಎಂದು ಸಚಿವರು ಶ್ಲಾಘಿಸಿದ್ದಾರೆ.
ಬೆಂಗಳೂರಿನ ಅಶೋಕನಗರದ ಗರುಡಾ ಮಾಲ್ನಲ್ಲಿ ಬುಧವಾರ ಸಂಜೆ ಸಚಿವರು ಚಿತ್ರ ವೀಕ್ಷಿಸಿದ್ದಾರೆ.
With a team of volunteers and well-wishers watched #KantaraMovie in Bengaluru. Well made @shetty_rishab (writer/director/actor).👏 The film captures the rich traditions of Tuluvanadu and Karavali.