ರೋಹಿತ್ ಶ್ರೀನಾಥ್ ಮತ್ತೆ ಬಣ್ಣದ ಲೋಕಕ್ಕೆ ಈ ಚಿತ್ರದ ಮೂಲಕ ಬಂದಿದ್ದಾರೆ. ಅನಿರುದ್ಧ್ ಶಾಸ್ತ್ರಿ, ಬಿ.ಎಂ. ವೆಂಕಟೇಶ್, ಹರೀಶ್ ಅರಸು ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಬೆಂಗಳೂರು, ಚೆನ್ನೈನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಾನಿಕ ಮೂವೀಸ್ ಬ್ಯಾನರ್ ನಡಿ ಊರ್ಮಿಳಾ ಕಿರಣ್ ಚಿತ್ರ ನಿರ್ಮಿಸಿದ್ದಾರೆ. ಹರಿ ಅಜಯ್ ಮತ್ತು ಕಾರ್ತಿಕ್ ಭೂಪತಿ ಸಂಗೀತ ನಿರ್ದೇಶನ, ರಾಕೇಶ್ ಸಿ. ತಿಲಕ್ ಮತ್ತು ಅರುಣ್ ಕುಮಾರ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.