<p>ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ ‘ಫಸ್ಟ್ ಸ್ಯಾಲರಿ’ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಯಿತು. ನಟಿ ಶ್ರುತಿ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಚಿತ್ರದ ಪ್ರದರ್ಶನ ನಡೆಯಿತು. </p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರುತಿ, ‘ನಾನು ಡಿ.ವಿ.ಸುಧೀಂದ್ರ ಅವರ ನಿರ್ಮಾಣದ ‘ನಗುನಗುತಾ ನಲಿ’ ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ಅವರ ಕುಟುಂಬದ ಪವನ್ ವೆಂಕಟೇಶ್ ಕಿರುಚಿತ್ರ ನಿರ್ಮಾಣ ಮಾಡಿದ್ದಾನೆ. ತಾಯಿ-ಮಗನ ಭಾವನಾತ್ಮಕ ಸನ್ನಿವೇಶಗಳು ಮನಸ್ಸಿಗೆ ಬಹಳ ಹತ್ತಿರವಾಯಿತು, ಕಣ್ಣಂಚಲಿ ನೀರು ತರಿಸಿತು’ ಎನ್ನುತ್ತಾ ‘ನನ್ನ ಮೊದಲ ವೇತನ ಐನೂರು ರೂಪಾಯಿಯಿತ್ತು’ ಎಂದು ನೆನಪಿಸಿಕೊಂಡರು. </p>.<p>‘ನನ್ನ ಚಿಕ್ಕಪ್ಪ ಡಿ.ವಿ.ಸುಧೀಂದ್ರ ಅವರು ಪಾಲುದಾರಿಕೆಯಲ್ಲಿ ಆರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಈಗ ನಾನು ಮೊದಲ ಬಾರಿಗೆ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಮಗ ಪವನ್ ಹಾಗೂ ಸ್ನೇಹಿತರು ಒಂದೊಳ್ಳೆ ಕಿರುಚಿತ್ರ ಮಾಡುತ್ತಿದ್ದೇವೆ ಎಂದು ಹೇಳಿದಾಗ ನಾನು ಅವರ ಜೊತೆಗೆ ನಿಂತೆ’ ಎಂದರು ಸುಧೀಂದ್ರ ವೆಂಕಟೇಶ್.</p>.<p>‘ನನ್ನ ಗೆಳೆಯ ವಿಜಯ್ ಶಿವಕುಮಾರ್ ಅವರು ಬರೆದ ಕಥೆ ಇದಾಗಿದೆ. ಅವರೇ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ, ರಕ್ಷಿತ್ ಇದರಲ್ಲಿ ನಟಿಸಿದ್ದಾರೆ. ನಾನು ನಿರ್ದೇಶಕನಾಗುವ ಕನಸನ್ನು ನನ್ನ ತಂದೆ ಸುಧೀಂದ್ರ ವೆಂಕಟೇಶ್ ಅವರು ಈ ಕಿರುಚಿತ್ರವನ್ನು ನಿರ್ಮಾಣ ಮಾಡುವ ಮೂಲಕ ನನಸು ಮಾಡಿದ್ದಾರೆ’ ಎನ್ನುತ್ತಾರೆ ಪವನ್ ವೆಂಕಟೇಶ್. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ ‘ಫಸ್ಟ್ ಸ್ಯಾಲರಿ’ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಯಿತು. ನಟಿ ಶ್ರುತಿ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಚಿತ್ರದ ಪ್ರದರ್ಶನ ನಡೆಯಿತು. </p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರುತಿ, ‘ನಾನು ಡಿ.ವಿ.ಸುಧೀಂದ್ರ ಅವರ ನಿರ್ಮಾಣದ ‘ನಗುನಗುತಾ ನಲಿ’ ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ಅವರ ಕುಟುಂಬದ ಪವನ್ ವೆಂಕಟೇಶ್ ಕಿರುಚಿತ್ರ ನಿರ್ಮಾಣ ಮಾಡಿದ್ದಾನೆ. ತಾಯಿ-ಮಗನ ಭಾವನಾತ್ಮಕ ಸನ್ನಿವೇಶಗಳು ಮನಸ್ಸಿಗೆ ಬಹಳ ಹತ್ತಿರವಾಯಿತು, ಕಣ್ಣಂಚಲಿ ನೀರು ತರಿಸಿತು’ ಎನ್ನುತ್ತಾ ‘ನನ್ನ ಮೊದಲ ವೇತನ ಐನೂರು ರೂಪಾಯಿಯಿತ್ತು’ ಎಂದು ನೆನಪಿಸಿಕೊಂಡರು. </p>.<p>‘ನನ್ನ ಚಿಕ್ಕಪ್ಪ ಡಿ.ವಿ.ಸುಧೀಂದ್ರ ಅವರು ಪಾಲುದಾರಿಕೆಯಲ್ಲಿ ಆರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಈಗ ನಾನು ಮೊದಲ ಬಾರಿಗೆ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಮಗ ಪವನ್ ಹಾಗೂ ಸ್ನೇಹಿತರು ಒಂದೊಳ್ಳೆ ಕಿರುಚಿತ್ರ ಮಾಡುತ್ತಿದ್ದೇವೆ ಎಂದು ಹೇಳಿದಾಗ ನಾನು ಅವರ ಜೊತೆಗೆ ನಿಂತೆ’ ಎಂದರು ಸುಧೀಂದ್ರ ವೆಂಕಟೇಶ್.</p>.<p>‘ನನ್ನ ಗೆಳೆಯ ವಿಜಯ್ ಶಿವಕುಮಾರ್ ಅವರು ಬರೆದ ಕಥೆ ಇದಾಗಿದೆ. ಅವರೇ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ, ರಕ್ಷಿತ್ ಇದರಲ್ಲಿ ನಟಿಸಿದ್ದಾರೆ. ನಾನು ನಿರ್ದೇಶಕನಾಗುವ ಕನಸನ್ನು ನನ್ನ ತಂದೆ ಸುಧೀಂದ್ರ ವೆಂಕಟೇಶ್ ಅವರು ಈ ಕಿರುಚಿತ್ರವನ್ನು ನಿರ್ಮಾಣ ಮಾಡುವ ಮೂಲಕ ನನಸು ಮಾಡಿದ್ದಾರೆ’ ಎನ್ನುತ್ತಾರೆ ಪವನ್ ವೆಂಕಟೇಶ್. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>