ಕೊಲೆ ಘಟನೆಯ ತನಿಖೆಯ ಸುತ್ತ ನಡೆಯುವ ಕಥೆ ಇದು. ದರ್ಶನ್ ಶ್ರೀನಿವಾಸ್ ಚಿತ್ರದ ನಿರ್ದೇಶಕರು.ಜೂನ್ ಮೊದಲವಾರ ಚಿತ್ರೀಕರಣ ಆರಂಭವಾಗಲಿದೆ.ಬೆಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ಚರಣ್ ತೇಜ್ ಅವರ ಛಾಯಾಗ್ರಹಣ ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನವಿದೆ. ಹೊಸ ಪ್ರತಿಭೆಗಳಾದ ನವೀನ್, ಮೇಘನಾ, ಸಂಜಯ್ ನಾಯಕ್, ಸೌರವ್, ಸತ್ಯ ಹಾಗೂ ರೇಣುಕಾ ಹಾಗೂ ಇತರರು ತಾರಾಗಣದಲ್ಲಿದ್ದಾರೆ.