ತಾನು ಬ್ಯಾಂಕ್ನ ವ್ಯವಸ್ಥಾಪಕಿ ಎಂಬುದಾಗಿ ಪರಿಚಯಿಸಿಕೊಂಡು, ‘ಬೆಂಗಳೂರಿನ ಸೌತ್ಎಂಡ್ ವೃತ್ತದಲ್ಲಿರುವ ಕೆನರಾ ಬ್ಯಾಂಕಿನಲ್ಲಿ ₹ 25 ಕೋಟಿ ಸಾಲಕ್ಕೆ ತಾವು ಅರ್ಜಿ ಸಲ್ಲಿಸಿದ್ದೀರಿ. ಅದರಲ್ಲಿ ನಟ ದರ್ಶನ್ ಅವರ ಆಸ್ತಿಯ ನಕಲಿ ದಾಖಲೆ ಒದಗಿಸಿದ್ದೀರಿ. ಅವರ ಸಹಿಯನ್ನೂ ನಕಲು ಮಾಡಿರುತ್ತೀರಿ’ ಎಂದು ಹೇಳುತ್ತಾರೆ. ಅಲ್ಲದೇ, ಈ ವಿಷಯವನ್ನು ಬಹಿರಂಗಪಡಿಸಬಾರದು ಎಂದರೆ ₹ 25 ಲಕ್ಷ ನೀಡಬೇಕು ಎಂದು ಬ್ಲ್ಯಾಕ್ಮೇಲ್ ಮಾಡುತ್ತಾರೆ. ಮಹಿಳೆಯು ನಕಲಿ ಅಧಿಕಾರಿ ಎಂಬುದು ಗೊತ್ತಾಗುತ್ತಿದ್ದಂತೆ, ಜುಲೈ 3ರಂದು ಹರ್ಷ ದೂರು ದಾಖಲಿಸುತ್ತಾರೆ.