ಅಂದಿನ ದುಃಖದ ಸನ್ನಿವೇಶ ಮತ್ತು ವೃತ್ತಿಬದುಕಿನ ಸವಾಲಿನ ಕ್ಷಣವನ್ನು ಗಣೇಶ್ ನೆನಪಿಸಿಕೊಂಡಿದ್ದು ಹೀಗೆ: ‘ಯಲಹಂಕದ ಬಳಿ ಶೂಟಿಂಗ್ ನಡೆಯುತ್ತಿತ್ತು. ಅಂದು ಮಧ್ಯಾಹ್ನ 3.30 ಗಂಟೆ. ಆಗ ಮನೆಯಿಂದ ಫೋನ್ ಬಂತು. ಆಗ ನಾನು ಕಾಮಿಡಿ ದೃಶ್ಯವೊಂದಕ್ಕೆ ಸಿದ್ಧತೆ ನಡೆಸಿದ್ದೆ. ಆ ಫೋನ್ನಿಂದ ಕೇಳಿದ ಸುದ್ದಿಯಿಂದ ಕಲಾವಿದನ ಕಷ್ಟ ಏನೆಂಬುದು ನನಗೆ ಅರ್ಥವಾಯಿತು. ಮಾಧ್ಯಮದವರು ನನ್ನನ್ನು ನ್ಯಾಚುರಲ್ ನಟ ಎಂದು ಬರೆಯುತ್ತಾರೆ. ಅದಕ್ಕೆ ನಾನೆಷ್ಟು ಅರ್ಹ ಎಂಬುದು ಗೊತ್ತಿಲ್ಲ. ಆದರೆ, ನಟನೊಬ್ಬ ಮಾನಸಿಕ ತೊಂದರೆಗೆ ಸಿಲುಕಿದರೆ ನಟನೆ ಎಷ್ಟು ಕಷ್ಟ ಎಂಬುದು ಅಂದು ಅರಿವಾಯಿತು’.