ಸೌಮ್ಯ ಫಿಲಂಸ್ ಬ್ಯಾನರಿನಡಿಯಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ಬಿ.ಸಿ.ಪಾಟೀಲ ಅವರ ಪತ್ನಿ ವನಜಾ ಪಾಟೀಲ ಹಾಗೂ ಪುತ್ರಿ ಸೃಷ್ಟಿ ಪಾಟೀಲ ಬಂಡವಾಳ ಹೂಡಿದ್ದಾರೆ. ಈ ಆ್ಯಕ್ಷನ್ ಡ್ರಾಮಾಗೆ ವಿ. ಹರಿಕೃಷ್ಣ ಸಂಗೀತ ನೀಡಿದ್ದು, ಜಯಂತ ಕಾಯ್ಕಿಣಿ ಹಾಗೂ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ. ರವಿಶಂಕರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.