ಬೆಂಗಳೂರು: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಬಿ ಆರ್ಯನ್ ಖಾನ್ರನ್ನು ಬಂಧಿಸಿದೆ.ಪುತ್ರನ ಆಗಮನಕ್ಕಾಗಿ ಶಾರುಖ್ ಮತ್ತು ಗೌರಿ ದಂಪತಿ ಕಾದು ಕುಳಿತಿದ್ದು, ಮನೆಯಲ್ಲಿ ಸಂಭ್ರಮವಿಲ್ಲ.
ಈ ಮಧ್ಯೆ ಆರ್ಯನ್ ಖಾನ್ ಬರುವವರೆಗೂ ಮನೆಯಲ್ಲಿ ಯಾವುದೇ ರೀತಿಯ ಸಿಹಿ ತಿನಿಸು ಅಡುಗೆ ಮಾಡಬಾರದು ಎಂದು ಗೌರಿ ಖಾನ್ ಅಡುಗೆಯವರಿಗೆ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಮನೆಯಲ್ಲಿನ ಅಡುಗೆ ಸಿಬ್ಬಂದಿಗೆ ಗೌರಿ ಖಾನ್ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ಇಂಡಿಯಾ ಟುಡೇ ವರದಿಯಲ್ಲಿ ಹೇಳಿದೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಅ. 20, ಬುಧವಾರ ನಡೆಯಲಿದೆ.