ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮಕ್ಕಿದು ಸರಿಯಾದ ಸಮಯವಲ್ಲ: ಜನ್ಮದಿನಾಚರಣೆ ಬೇಡವೆಂದ ಗಣೇಶ್‌

Last Updated 29 ಜೂನ್ 2021, 6:36 IST
ಅಕ್ಷರ ಗಾತ್ರ

ಜುಲೈ 2, ನಟ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಜನ್ಮದಿನ. ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಿಂದ ಆಚರಿಸಲು ಕಾಯುತ್ತಿದ್ದ ಅಭಿಮಾನಿಗಳಿಗೆ ಇದೇ ಸಂದರ್ಭದಲ್ಲಿ ಗಣೇಶ್‌ ಮನವಿಯೊಂದನ್ನು ಮಾಡಿದ್ದಾರೆ. ಈ ವರ್ಷ ಜನ್ಮದಿನವನ್ನು ಆಚರಿಸಿಕೊಳ್ಳದೇ ಇರಲು ನಿರ್ಧರಿಸಿರುವ ಗಣೇಶ್‌, ಇದಕ್ಕೆ ಕಾರಣವನ್ನೂ ನೀಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಗಣೇಶ್‌, ‘ಮೊದಲಿಗೆ, ನನಗೆ ಅರಿವಿದ್ದೋ, ಅರಿವಿಲ್ಲದೆಯೋ ಈ ಕೋವಿಡ್‌ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದರೆ, ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾಗಿದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನ ನಲುಗಿ ಹೋಗಿವೆ. ಇಷ್ಟೆಲ್ಲ ನೋವಿನ ನಡುವೆ ಸಂಭ್ರಮಕ್ಕಿದು ಸರಿಯಾದ ಸಮಯವಲ್ಲವೆಂದೆನಿಸಿ ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ. ಅಲ್ಲದೆ ಜನ್ಮದಿನದಂದು ನಾನು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿರುತ್ತೇನೆ. ಪ್ರತಿ ವರ್ಷವೂ ಪ್ರೀತಿಯಿಂದ ಜನ್ಮದಿನದ ಆಚರಣೆಗೆ ನೀವು ಪ್ರೀತಿಯಿಂದ ತರುವ ಕೇಕ್‌, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೆ ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ’ ಎಂದಿದ್ದಾರೆ.

ಲಾಕ್‌ಡೌನ್‌ ನಿರ್ಬಂಧ ಸಡಿಲಿಸಿ, ಹೊರಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಗಣೇಶ್‌ ಅಭಿನಯದ ‘ಸಖತ್‌’ ಸಿನಿಮಾದ ಚಿತ್ರೀಕರಣ ಬುಧವಾರದಿಂದ ಆರಂಭವಾಗುತ್ತಿದೆ. ಈ ಚಿತ್ರದ ಜೊತೆಗೆ ಯೋಗರಾಜ್‌ ಭಟ್‌ ನಿರ್ದೇಶನದ ‘ಗಾಳಿಪಟ–2’ರ ಚಿತ್ರೀಕರಣದಲ್ಲಿ ಗಣೇಶ್‌ ತೊಡಗಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT