2006ರಲ್ಲಿ ಬಿಡುಗಡೆಯಾಗಿದ್ದ ‘ಚೆಲ್ಲಾಟ’ ಸಿನಿಮಾ ಮೂಲಕ ನಾಯಕನಾಗಿ ಚಂದನವನದಲ್ಲಿ ಪಯಣ ಆರಂಭಿಸಿದ್ದ ನಟ ಗಣೇಶ್ಗೆ ಬ್ರೇಕ್ ನೀಡಿದ್ದು, ಯೋಗರಾಜ್ ಭಟ್ ನಿರ್ದೇಶದನ ‘ಮುಂಗಾರು ಮಳೆ’ ಚಿತ್ರ. ಈ ಸಿನಿಮಾ ಗಣೇಶ್ ಅವರ ಸಿನಿ ಬದುಕನ್ನೇ ಬದಲಾಯಿಸಿತ್ತು. ಗಣೇಶ್ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದರು. ನಂತರ ಹಲವು ಹಿಟ್ ಚಿತ್ರಗಳನ್ನು ಗಣೇಶ್ ನೀಡಿದ್ದರು. ಸದ್ಯ, ಯೋಗರಾಜ್ ಭಟ್ ನಿರ್ದೇಶನದ ಬಹುನಿರೀಕ್ಷಿತ ‘ಗಾಳಿಪಟ–2’ ಸಿನಿಮಾ ಬಿಡುಗಡೆಗೆ ಗಣೇಶ್ ಕಾಯುತ್ತಿದ್ದಾರೆ. ಆಗಸ್ಟ್ 12ರಂದು ಈ ಸಿನಿಮಾ ಬಿಡುಗಡೆಯಾಗಲಿದೆ. ಇದರ ನಡುವೆ‘ಮುಂಗಾರು ಮಳೆ’ಗೆ ಕಥೆ ಬರೆದಿದ್ದ ಪ್ರೀತಮ್ ಗುಬ್ಬಿ ನಿರ್ದೇಶನದ ಹೊಸ ಸಿನಿಮಾ ‘ಬಾನದಾರಿಯಲ್ಲಿ’ ಸೆಟ್ಟೇರಿದೆ. ಈ ಸಿನಿಮಾದಲ್ಲಿ ಗಣಿ, ನಟಿಯರಾದ ರುಕ್ಮಿಣಿ ವಸಂತ್, ರೀಷ್ಮಾ ನಾಣಯ್ಯ ಜೊತೆ ಪಯಣ ಆರಂಭಿಸಿದ್ದಾರೆ.