ರೊಮ್ಯಾಂಟಿಕ್ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಟಿ.ವಿ. ರಿಯಾಲಿಟಿ ಶೋ ಹಾಗೂ ಕೋರ್ಟ್ ಕೇಸ್ ಸುತ್ತ ಸಿನಿಮಾ ಕಥೆ ಹೆಣೆಯಲಾಗಿದೆ. ಗಣೇಶ್ ರಿಯಾಲಿಟಿ ಶೋ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಹಾಗೂ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ತಾರಾಗಣದಲ್ಲಿದ್ದಾರೆ. ಕೆವಿಎನ್ ಪ್ರೊಡಕ್ಷನ್ನಡಿ ತಯಾರಾಗಿರುವ ಈ ಚಿತ್ರಕ್ಕೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ.