<p><strong>ಬೆಂಗಳೂರು</strong>: ಕೊರೊನಾದಿಂದರಾಜ್ಯದ ಮೃಗಾಲಯಗಳುಸಂಕಷ್ಟಕ್ಕೆಸಿಲುಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ತೂಗುದೀಪ್ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ಮಾಡಿದ್ದ ಮನವಿಗೆ ಪ್ರಾಣಿಪ್ರಿಯರು ಉತ್ತಮರೀತಿಯಲ್ಲಿ ಸ್ಪಂದಿಸಿದ್ದಾರೆ.</p>.<p>ಮೈಸೂರಿನಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಎಂಬ ಹೆಸರಿನ ಸಿಂಹವನ್ನು ನಿರ್ಮಾಪಕ ಶೈಲಜಾ ನಾಗ್ ದತ್ತು ಪಡೆದಿದ್ದಾರೆ.</p>.<p>ಇದೇ ರೀತಿ ಹಲವರು ರಾಜ್ಯದ 9 ಮೃಗಾಲಯಗಳ ಪ್ರಾಣಿಗಳನ್ನು ದತ್ತು ಪಡೆಯಲು ಮುಂದಾಗಿದ್ದಾರೆ.<br />ತಮ್ಮ ಮಾತಿಗೆ ಸ್ಪಂದಿಸಿದ ಜನತೆಗೆ ದರ್ಶನ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ.</p>.<p>ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್, ಕೋವಿಡ್ನ ಈ ಸಂಕಷ್ಟದ ಸಂದರ್ಭದಲ್ಲಿ ಜನರೂ ತಮ್ಮ ಹತ್ತಿರದ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳನ್ನು ದತ್ತುಪಡೆಯಲು ಕರೆ ನೀಡಿದ್ದರು.</p>.<p>‘ಕೋವಿಡ್ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಕರ್ನಾಟಕದಲ್ಲಿ9 ಮೃಗಾಲಯಗಳಿದ್ದು, ಇವುಗಳಲ್ಲಿ 5 ಸಾವಿರ ಪ್ರಾಣಿಗಳಿವೆ. ಇವುಗಳನ್ನು ನೋಡಲು ದೇಶದಾದ್ಯಂತದಿಂದ ಜನರು ಬರುತ್ತಿದ್ದರು. ಅವರು ಪಡೆಯುತ್ತಿದ್ದ ಟಿಕೆಟ್ನಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಈ ಪ್ರಾಣಿಗಳಿಗೆ ಆಹಾರ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು. ಕೋವಿಡ್ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ’ ಎಂದಿದ್ದರು.</p>.<p>‘ಜನರು ಈ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್ಬರ್ಡ್ಗೆ ವರ್ಷಕ್ಕೆ ₹1 ಸಾವಿರ, ಹುಲಿಗೆ ₹1 ಲಕ್ಷ ಹಾಗೂ ಆನೆಗೆ ₹1.17 ಲಕ್ಷ ನೀಡಿ ದತ್ತುಪಡೆದು ಪ್ರಾಣಿಸಂಕುಲ ಉಳಿಸಲು, ಮೃಗಾಲಯ ಬೆಳೆಸಲು ಎಲ್ಲರೂ ಕೈಜೋಡಿಸಿ. ‘zoo of karnataka’ ಆ್ಯಪ್ ಮುಖಾಂತರ ಅಥವಾ ಮೃಗಾಲಯಗಳಿಗೇ ಭೇಟಿ ನೀಡಿ ಈ ದತ್ತು ಪಡೆಯುವ ಪ್ರಕ್ರಿಯೆ ಕುರಿತು ಮಾಹಿತಿ ಪಡೆಯಬಹುದು. ಈ ಒಳ್ಳೆಯ ಕಾರ್ಯಕ್ಕೆ ನಾವೆಲ್ಲರೂ ಕೈಜೋಡಿಸೋಣ’ ಎಂದು ದರ್ಶನ್ ಹೇಳಿದ್ದರು. ಇದಕ್ಕೆ ಜನ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.</p>.<p>ಇದನ್ನೂ ಓದಿ:<a href="https://cms.prajavani.net/entertainment/cinema/kannada-actor-ramesh-aravind-inspirational-talks-for-public-in-social-media-post-836523.html" itemprop="url">ನೀವೇಕೆ ನೆಗೆಟಿವ್ ಆಲೋಚನೆ ಮಾಡುತ್ತೀರಿ: ರಮೇಶ್ ಅರವಿಂದ್ ಸ್ಫೂರ್ತಿಯ ಮಾತುಗಳು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾದಿಂದರಾಜ್ಯದ ಮೃಗಾಲಯಗಳುಸಂಕಷ್ಟಕ್ಕೆಸಿಲುಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ತೂಗುದೀಪ್ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ಮಾಡಿದ್ದ ಮನವಿಗೆ ಪ್ರಾಣಿಪ್ರಿಯರು ಉತ್ತಮರೀತಿಯಲ್ಲಿ ಸ್ಪಂದಿಸಿದ್ದಾರೆ.</p>.<p>ಮೈಸೂರಿನಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಎಂಬ ಹೆಸರಿನ ಸಿಂಹವನ್ನು ನಿರ್ಮಾಪಕ ಶೈಲಜಾ ನಾಗ್ ದತ್ತು ಪಡೆದಿದ್ದಾರೆ.</p>.<p>ಇದೇ ರೀತಿ ಹಲವರು ರಾಜ್ಯದ 9 ಮೃಗಾಲಯಗಳ ಪ್ರಾಣಿಗಳನ್ನು ದತ್ತು ಪಡೆಯಲು ಮುಂದಾಗಿದ್ದಾರೆ.<br />ತಮ್ಮ ಮಾತಿಗೆ ಸ್ಪಂದಿಸಿದ ಜನತೆಗೆ ದರ್ಶನ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ.</p>.<p>ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್, ಕೋವಿಡ್ನ ಈ ಸಂಕಷ್ಟದ ಸಂದರ್ಭದಲ್ಲಿ ಜನರೂ ತಮ್ಮ ಹತ್ತಿರದ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳನ್ನು ದತ್ತುಪಡೆಯಲು ಕರೆ ನೀಡಿದ್ದರು.</p>.<p>‘ಕೋವಿಡ್ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಕರ್ನಾಟಕದಲ್ಲಿ9 ಮೃಗಾಲಯಗಳಿದ್ದು, ಇವುಗಳಲ್ಲಿ 5 ಸಾವಿರ ಪ್ರಾಣಿಗಳಿವೆ. ಇವುಗಳನ್ನು ನೋಡಲು ದೇಶದಾದ್ಯಂತದಿಂದ ಜನರು ಬರುತ್ತಿದ್ದರು. ಅವರು ಪಡೆಯುತ್ತಿದ್ದ ಟಿಕೆಟ್ನಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಈ ಪ್ರಾಣಿಗಳಿಗೆ ಆಹಾರ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು. ಕೋವಿಡ್ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ’ ಎಂದಿದ್ದರು.</p>.<p>‘ಜನರು ಈ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್ಬರ್ಡ್ಗೆ ವರ್ಷಕ್ಕೆ ₹1 ಸಾವಿರ, ಹುಲಿಗೆ ₹1 ಲಕ್ಷ ಹಾಗೂ ಆನೆಗೆ ₹1.17 ಲಕ್ಷ ನೀಡಿ ದತ್ತುಪಡೆದು ಪ್ರಾಣಿಸಂಕುಲ ಉಳಿಸಲು, ಮೃಗಾಲಯ ಬೆಳೆಸಲು ಎಲ್ಲರೂ ಕೈಜೋಡಿಸಿ. ‘zoo of karnataka’ ಆ್ಯಪ್ ಮುಖಾಂತರ ಅಥವಾ ಮೃಗಾಲಯಗಳಿಗೇ ಭೇಟಿ ನೀಡಿ ಈ ದತ್ತು ಪಡೆಯುವ ಪ್ರಕ್ರಿಯೆ ಕುರಿತು ಮಾಹಿತಿ ಪಡೆಯಬಹುದು. ಈ ಒಳ್ಳೆಯ ಕಾರ್ಯಕ್ಕೆ ನಾವೆಲ್ಲರೂ ಕೈಜೋಡಿಸೋಣ’ ಎಂದು ದರ್ಶನ್ ಹೇಳಿದ್ದರು. ಇದಕ್ಕೆ ಜನ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.</p>.<p>ಇದನ್ನೂ ಓದಿ:<a href="https://cms.prajavani.net/entertainment/cinema/kannada-actor-ramesh-aravind-inspirational-talks-for-public-in-social-media-post-836523.html" itemprop="url">ನೀವೇಕೆ ನೆಗೆಟಿವ್ ಆಲೋಚನೆ ಮಾಡುತ್ತೀರಿ: ರಮೇಶ್ ಅರವಿಂದ್ ಸ್ಫೂರ್ತಿಯ ಮಾತುಗಳು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>