ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ದರ್ಶನ್‌ರ ಈ ಒಂದು ಮಾತಿಗೆ ಓಡೋಡಿ ಬಂದು ಸೈ ಎಂದ ಜನ

ಅಕ್ಷರ ಗಾತ್ರ

ಬೆಂಗಳೂರು: ಕೊರೊನಾದಿಂದರಾಜ್ಯದ ಮೃಗಾಲಯಗಳುಸಂಕಷ್ಟಕ್ಕೆಸಿಲುಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ತೂಗುದೀಪ್ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ಮಾಡಿದ್ದ ಮನವಿಗೆ ಪ್ರಾಣಿಪ್ರಿಯರು ಉತ್ತಮರೀತಿಯಲ್ಲಿ ಸ್ಪಂದಿಸಿದ್ದಾರೆ.

ಮೈಸೂರಿನಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಎಂಬ ಹೆಸರಿನ ಸಿಂಹವನ್ನು ನಿರ್ಮಾಪಕ ಶೈಲಜಾ ನಾಗ್ ದತ್ತು ಪಡೆದಿದ್ದಾರೆ.

ಇದೇ ರೀತಿ ಹಲವರು ರಾಜ್ಯದ 9 ಮೃಗಾಲಯಗಳ ಪ್ರಾಣಿಗಳನ್ನು ದತ್ತು ಪಡೆಯಲು ಮುಂದಾಗಿದ್ದಾರೆ.
ತಮ್ಮ ಮಾತಿಗೆ ಸ್ಪಂದಿಸಿದ ಜನತೆಗೆ ದರ್ಶನ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ.

ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್‌ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್‌, ಕೋವಿಡ್‌ನ ಈ ಸಂಕಷ್ಟದ ಸಂದರ್ಭದಲ್ಲಿ ಜನರೂ ತಮ್ಮ ಹತ್ತಿರದ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳನ್ನು ದತ್ತುಪಡೆಯಲು ಕರೆ ನೀಡಿದ್ದರು.

‘ಕೋವಿಡ್‌ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಕರ್ನಾಟಕದಲ್ಲಿ9 ಮೃಗಾಲಯಗಳಿದ್ದು, ಇವುಗಳಲ್ಲಿ 5 ಸಾವಿರ ಪ್ರಾಣಿಗಳಿವೆ. ಇವುಗಳನ್ನು ನೋಡಲು ದೇಶದಾದ್ಯಂತದಿಂದ ಜನರು ಬರುತ್ತಿದ್ದರು. ಅವರು ಪಡೆಯುತ್ತಿದ್ದ ಟಿಕೆಟ್‌ನಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಈ ಪ್ರಾಣಿಗಳಿಗೆ ಆಹಾರ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು. ಕೋವಿಡ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ’ ಎಂದಿದ್ದರು.

‘ಜನರು ಈ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್‌ಬರ್ಡ್‌ಗೆ ವರ್ಷಕ್ಕೆ ₹1 ಸಾವಿರ, ಹುಲಿಗೆ ₹1 ಲಕ್ಷ ಹಾಗೂ ಆನೆಗೆ ₹1.17 ಲಕ್ಷ ನೀಡಿ ದತ್ತುಪಡೆದು ಪ್ರಾಣಿಸಂಕುಲ ಉಳಿಸಲು, ಮೃಗಾಲಯ ಬೆಳೆಸಲು ಎಲ್ಲರೂ ಕೈಜೋಡಿಸಿ. ‘zoo of karnataka’ ಆ್ಯಪ್‌ ಮುಖಾಂತರ ಅಥವಾ ಮೃಗಾಲಯಗಳಿಗೇ ಭೇಟಿ ನೀಡಿ ಈ ದತ್ತು ಪಡೆಯುವ ಪ್ರಕ್ರಿಯೆ ಕುರಿತು ಮಾಹಿತಿ ಪಡೆಯಬಹುದು. ಈ ಒಳ್ಳೆಯ ಕಾರ್ಯಕ್ಕೆ ನಾವೆಲ್ಲರೂ ಕೈಜೋಡಿಸೋಣ’ ಎಂದು ದರ್ಶನ್‌ ಹೇಳಿದ್ದರು. ಇದಕ್ಕೆ ಜನ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT