ಬೆಂಗಳೂರು ಮತ್ತು ಮೈಸೂರು ಭಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ. ಆನಂದ್ ಪ್ರಿಯಾ, ಪ್ರಮೋದ್ ಮರವಂತೆ ಹಾಗೂ ನಿರ್ದೇಶಕರು ರಚಿಸಿರುವ ಸಾಹಿತ್ಯಕ್ಕೆ ಶ್ರೀಧರ್ ಸಂಭ್ರಮ್ ಸಂಗೀತ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಣ ಕುಮಾರ್ ಎಂ., ಸಂಕಲನ ಅರ್ಜುನ್ ಕಿಟ್ಟು ಅವರದಾಗಿದೆ. ಫೆಬ್ರವರಿ 14ರಂದು ಮಹೂರ್ತ ನಡೆಯಲಿದೆ. ಖ್ಯಾತ ನಟರೊಬ್ಬರು ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.