ಹನ್ನೆರಡು ವರ್ಷಗಳಿಂದ ಎಸ್.ಮಹೇಂದರ್, ಪಿ.ಎನ್.ಸತ್ಯ ಮುಂತಾದವರ ಜೊತೆ ಕೆಲಸ ಮಾಡಿ ಅನುಭವವಿರುವ ಭರತ್ ಎಸ್. ನಾವುಂದ್ ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿರುವ ಭರತ್ ಸಾಹಸ ನಿರ್ದೇಶನವನ್ನೂ ಮಾಡಿದ್ದಾರೆ. ಸೈಕಲಾಜಿಕಲ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಶಿವಮಂಜು, ಕೆ.ಎಸ್.ಶ್ರೀಧರ್, ಶ್ರೀನಿವಾಸಪ್ರಭು, ವಿದ್ಯಾ ಕುಲಕರ್ಣಿ, ಪ್ರೀತು ಪೂಜಾ, ಸುಶೀಲ್ ಕುಮಾರ್, ಮಾಸ್ಟರ್ ಕಾರ್ತಿಕ್ ಪ್ರಮುಖ ತಾರಾಬಳಗದಲ್ಲಿದ್ದಾರೆ.