ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರದಿಂದ ಸಾಗಿದೆ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರೀಕರಣ

Last Updated 30 ಡಿಸೆಂಬರ್ 2020, 5:41 IST
ಅಕ್ಷರ ಗಾತ್ರ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ರಿಷಬ್ ಶೆಟ್ಟಿ ಫಿಲಂಸ್ ಸಹಯೋಗದೊಂದಿಗೆ ನಿರ್ಮಿಸುತ್ತಿರುವ, ನಿರ್ದೇಶಕ, ನಟ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಹರಿಕಥೆ ಅಲ್ಲ ಗಿರಿಕಥೆ’.

ಕರಣ್ ಅನಂತ್ ಹಾಗೂ‌ ಅನಿರುದ್ಧ್‌ ಮಹೇಶ್ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಅಕ್ಟೋಬರ್ 1 ರಿಂದ ಡಿಸೆಂಬರ್ 20ರವರೆಗೂ ಮೈಸೂರಿನಲ್ಲಿ ನಡೆದಿತ್ತು.

ಡಿಸೆಂಬರ್ 26 ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಶೂಟಿಂಗ್ ನಡೆದಿದ್ದು, ಜನವರಿ 2ರಿಂದ ಗೋವಾ, ಆನಂತರ ಮಡಿಕೇರಿಯಲ್ಲಿ ದ್ವಿತೀಯ ಹಂತದ ಚಿತ್ರೀಕರಣ ನಡೆಯಲಿದೆ.

ಗಿರಿಕೃಷ್ಣ ಕಥೆ ಹಾಗೂ ರಿಷಬ್ ಶೆಟ್ಟಿ, ಅನಿರುದ್ಧ್ ಮಹೇಶ್, ಕರಣ್ ಅನಂತ್ ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಅನಿರುದ್ಧ್ ಮಹೇಶ್ ಮಾತು ಬರೆದಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಚಂದ್ರಶೇಖರನ್ , ರಂಗನಾಥ್ ಸಿ.ಎಂ ಛಾಯಾಗ್ರಹಣ,
ಪ್ರಗತಿ ರಿಷಬ್ ಶೆಟ್ಟಿ ವಸ್ತ್ರವಿನ್ಯಾಸ ಹಾಗೂ ರಿತ್ವಿಕ್ ಅವರ ಸಂಕಲನ ಈ ಚಿತ್ರಕ್ಕಿದೆ.

ಧರಣಿ ಗಂಗೆಪುತ್ರ ಚಿತ್ರದ ನಿರ್ಮಾಣ ವಿನ್ಯಾಸಕರಾಗಿದ್ದು, ಪ್ರಮೋದ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ರಿಷಬ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ ಪೊನ್ನಚ್ಚ, ಹೊನ್ನವಳ್ಳಿ ಕೃಷ್ಣ, ಪ್ರಮೋದ್ ಶೆಟ್ಟಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT