ಇನ್ನು ಹುಬ್ಬಳ್ಳಿಯಲ್ಲಿ ಮಾತನಾಡಿರುವ ನಟ ಪ್ರೇಮ್ ಅವರು, ‘ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಅದನ್ನು ಹಾಳು ಮಾಡುವ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ರಾಜ್ಯದಲ್ಲಿ ಮರಾಠಿ ಮತ್ತು ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಇವುಗಳನ್ನು ಎಂಇಎಸ್ ಅರ್ಥ ಮಾಡಿಕೊಳ್ಳಬೇಕು. ಬಾವುಟ ಸುಟ್ಟವರಿಗೆ ಶಿಕ್ಷೆಯಾಗಬೇಕು’ ಎಂದಿದ್ದಾರೆ.